ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಆಟೋದಲ್ಲಿ ಸಾಗಿಸುತ್ತಿದ್ದ 3 ಕೆಜಿ ಚಿನ್ನದ ಬಿಸ್ಕತ್, 41 ಲಕ್ಷ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 41 ಲಕ್ಷ ರೂ. ನಗದು ಮತ್ತು 3 ಕೆಜಿ ಚಿನ್ನದ ಬಿಸ್ಕತ್ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಕೊಯಮತ್ತೂರಿನ ಮೂಲದ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಂಧಿತರನ್ನು ನಟರಾಜ್, ಬಾಲ ಹಾಗೂ ರಾಮ್ ಕುಮಾರ್ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಹೈಗ್ರೌಂಡ್ಸ್ ಪೊಲೀಸರು ನಾಕಾಬಂದಿಯಲ್ಲಿ ಎಲ್ಲಾ ವಾಹನಗಳ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಚಿನ್ನ ಮತ್ತು ನಗದು ಸಾಗಿಸುತ್ತಿದ್ದ ಆಟೋವನ್ನು ಪತ್ತೆಹಚ್ಚಿದರು.
ಚಿನ್ನದ ಬಿಸ್ಕತ್ಗಳನ್ನು ಎಲ್ಲಿಂದ ಸಾಗಣೆ ಮಾಡುತ್ತಿದ್ದಾರೆಂಬ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇವರ ಹಿಂದೆ ದೊಡ್ಡ ಜಾಲವೇ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.