Webdunia - Bharat's app for daily news and videos

Install App

ಪಾಕ್ ಪರ ಘೋಷಣೆ ಕೂಗಿದ ಆರೋಪಿ ಶಫಿ ನಾಶಿಪುಡಿ ಧ್ವನಿ ಪರೀಕ್ಷೆ ಮಾಡಿದ ಪೊಲೀಸರು

Krishnaveni K
ಗುರುವಾರ, 29 ಫೆಬ್ರವರಿ 2024 (17:39 IST)
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಲ್ಲಿ ಬಂಧಿತನಾಗಿರುವ ಶಫಿ ನಾಶಿಪುಡಿ ಧ‍್ವನಿ ಪರೀಕ್ಷೆ ಮಾಡಲು ನಿರ್ಧರಿಸಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ ಅಭ್ಯರ್ಥಿ ನಾಸಿರ್ ಹುಸೇನ್ ಗೆದ್ದ ಬಳಿಕ ಅವರ ಬೆಂಬಲಿಗನೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂದು ವಿಧಾನಸೌಧದಲ್ಲೇ ಘೋಷಣೆ ಕೂಗಿದ್ದ. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಸದನಸಲ್ಲೂ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ಇದೇ ವಿಚಾರಕ್ಕೆ ಕಿತ್ತಾಡಿಕೊಂಡಿತ್ತು. ಪ್ರಕರಣದ ಬಗ್ಗೆ ವಿಧಾನಸೌಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು.

ಇದರ ನಡುವೆ ಬ್ಯಾಡಗಿಯ ಶಫಿ ನಾಶಿಪುಡಿ ಎಂಬಾತನೇ ವಿಡಿಯೋದಲ್ಲಿ ಘೋಷಣೆ ಕೂಗಿದ ವ್ಯಕ್ತಿ ಎಂದು ಬ್ಯಾಡಗಿಯ ಬಿಜೆಪಿ ಕಾರ್ಯಕರ್ತರು ಗುರುತಿಸಿದ್ದರು. ಅದರಂತೆ ಆತನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗುತ್ತಿದೆ. ಆದರೆ ಈ ಆರೋಪವನ್ನು ಆರೋಪಿ ನಿರಾಕರಿಸಿದ್ದು, ನಾನು ನಾಸಿರ್ ಸಾಬ್ ಜಿಂದಾಬಾದ್ ಎಂದು ಕೂಗಿದ್ದೇನೆ. ಪಾಕಿಸ್ತಾನ್ ಎಂದಿಲ್ಲ. ದೇಶದ್ರೋಹ ಘೋಷಣೆ ಕೂಗಿಲ್ಲ ಎಂದಿದ್ದಾನೆ. ಆದರೆ ಇದೀಗ ವಿಡಿಯೋದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಇದೇ ಶಫಿ ನಾಶಿಪುಡಿಯೇ ಎಂಬುದನ್ನು ಖಚಿತಪಡಿಸಲು ಪೊಲೀಸರು ಧ್ವನಿ ಪರೀಕ್ಷೆಗೊಳಪಡಿಸುತ್ತಿದ್ದಾರೆ.

ಪ್ರಕರಣ ಸದನದಲ್ಲೂ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ. ದೇಶ ದ್ರೋಹಿಗಳಿಗೆ ಕಾಂಗ್ರೆಸ್ ರೆಡ್ ಕಾರ್ಪೆಟ್ ಹಾಕಿ ಸ್ವಾಗತಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದರೆ ಕಾಂಗ್ರೆಸ್ ಇದೆಲ್ಲಾ ಬಿಜೆಪಿಯ ಕಲ್ಪಿತ ವಿಚಾರಗಳು ಎಂದು ತಿರುಗೇಟು ನೀಡಿದೆ. ಇಂದೂ ಕೂಡಾ ಸದನದಲ್ಲಿ ಈ ವಿಚಾರ ಸದ್ದು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಯುವತಿಯ ಶವ ಸೂಟ್‌ಕೇಸ್‌ನಲ್ಲಿ ತುಂಬಿ ರೈಲಿನಿಂದ ಎಸೆದ ಪಾಪಿಗಳು: ರೈಲ್ವೆ ಸೇತುವೆ ಬಳಿ ಪತ್ತೆ

ಜೈಲಿನಲ್ಲಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂನಿಂದ ಕೊನೆಗೂ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments