ಕಥೆ ಕೇಳಿ ಬಿಟ್ಟು ಕಳಿಸಿದ ಪೊಲೀಸರು!

geetha
ಶನಿವಾರ, 17 ಫೆಬ್ರವರಿ 2024 (19:00 IST)
ಬೆಂಗಳೂರು : ಕೈಲಿದ್ದ ಮೊಬೈಲ್‌ ಫೋನ್‌ ಅನ್ನು ಕಸಿದುಕೊಂಡು ಓಡುತ್ತಿದ್ದ ಕಳ್ಳನೊಬ್ಬನನ್ನು ಮಹಿಳಾ ಪೊಲೀಸ್‌ ಸಿಬ್ಬಂದಿಯೊಬ್ಬರು ಬೆನ್ನಟ್ಟಿ ಹಿಡಿದಿರುವ ಘಟನೆ ಫೆ. 14 ರಂದು ಅಶೋಕ್‌ ನಗರದ ಖಾಸಗಿ ಕಾಲೇಜಿನ ಬಳಿ ನಡೆದಿದೆ. ಆದರೆ ಸಿಕ್ಕಿಹಾಕಿಕೊಂಡ ಬಳಿಕ ಕಳ್ಳ ಹೇಳಿದ ಕಥೆಗ ಮನಕರಗಿ ಪೊಲೀಸರು ಆತನನ್ನು ಬಿಟ್ಟು ಕಳಿಸಿದ್ದಾರೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಬ್ಬಳನ್ನು ರಾಯಚೂರು ಮೂಲದ ಯುವಕನೊಬ್ಬ ಪ್ರೀತಿಸುತ್ತಿದ್ದ. ಪ್ರೇಮಿಗಳ ದಿನಾಚರಣೆಯಂದು ಆಕೆಗೆ ಸರ್‌ ಪ್ರೈಸ್‌ ನೀಡಬೇಕೆಂಬ ಉದ್ದೇಶದಿಂದ ಆಕೆಗೆ ತಿಳಿಸದೇ ಕಾಲೇಜಿನ ಬಳಿ ಬಂದಿದ್ದ. 

ಕಾಲೇಜಿನ ಬಳಿ ಆ ಯುವತಿ ಮತ್ತೊಬ್ಬ ಯುವಕನೊಡನೆ ನಿಕಟವಾಗಿರುವುದನ್ನು ನೋಡಿ ಯುವಕ ರೊಚ್ಚಿಗೆದ್ದು ಗಲಾಟೆ ಮಾಡಿದ್ದ. ಇದಕ್ಕೆ ಪ್ರತಿಕ್ರಿಯಿಸಿದ ಆ ಯುವತಿ ಈತ ನನ್ನ ಪ್ರಿಯಕರನಲ್ಲ, ಕೇವಲ ಸ್ನೇಹಿತ ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಳು. ಆದರೆ ತೃಪ್ತನಾಗದ ಭಗ್ನ ಪ್ರೇಮಿ ಅವರಿಬ್ಬರ ಮೊಬೈಲ್‌ ಚೆಕ್‌ ಮಾಡಲು ಮುಂದಾಗಿದ್ದ. ಅವರ ಮೊಬೈಲ್‌ ನ್ನು ಕಸಿದುಕೊಂಡು ಓಡುತ್ತಿದ್ದಂತೆಯೇ ಇಬ್ಬರೂ ಆತನ ಬೆನ್ನೆತ್ತಿದ್ದರು. ಇದನ್ನು ಕಂಡ ಸಂಚಾರಿ ವಿಭಾಗದ ಪೊಲೀಸ್‌ ಶಾಜಿಯಾ ತಬಸ್ಸುಂ ತಾವೂ ಸಹಾ ಅವರನ್ನು ಅಟ್ಟಿಸಿಕೊಂಡು ಹೋಗಿ ಹಿಡಿದಿದ್ದರು. ವಿಚಾರಣೆಯಲ್ಲಿ ಈ ಕಥೆ ಹೊರಬಂದಿದ್ದು, ಮೂವರನ್ನೂ ಕರೆಸಿ ಪೊಲೀಸರು ಬುದ್ದಿಮಾತು ಹೇಳಿ ಕಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಡಿಕೆ ಶಿವಕುಮಾರ್ ಗೆ ಸಿಎಂ ಹುದ್ದೆ ಕೊಟ್ಟರೆ ಸಿದ್ದರಾಮಯ್ಯ ಬಣದ ನಡೆ ಏನಿರಬಹುದು

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ಮುಂದಿನ ಸುದ್ದಿ
Show comments