Webdunia - Bharat's app for daily news and videos

Install App

ಕಥೆ ಕೇಳಿ ಬಿಟ್ಟು ಕಳಿಸಿದ ಪೊಲೀಸರು!

geetha
ಶನಿವಾರ, 17 ಫೆಬ್ರವರಿ 2024 (19:00 IST)
ಬೆಂಗಳೂರು : ಕೈಲಿದ್ದ ಮೊಬೈಲ್‌ ಫೋನ್‌ ಅನ್ನು ಕಸಿದುಕೊಂಡು ಓಡುತ್ತಿದ್ದ ಕಳ್ಳನೊಬ್ಬನನ್ನು ಮಹಿಳಾ ಪೊಲೀಸ್‌ ಸಿಬ್ಬಂದಿಯೊಬ್ಬರು ಬೆನ್ನಟ್ಟಿ ಹಿಡಿದಿರುವ ಘಟನೆ ಫೆ. 14 ರಂದು ಅಶೋಕ್‌ ನಗರದ ಖಾಸಗಿ ಕಾಲೇಜಿನ ಬಳಿ ನಡೆದಿದೆ. ಆದರೆ ಸಿಕ್ಕಿಹಾಕಿಕೊಂಡ ಬಳಿಕ ಕಳ್ಳ ಹೇಳಿದ ಕಥೆಗ ಮನಕರಗಿ ಪೊಲೀಸರು ಆತನನ್ನು ಬಿಟ್ಟು ಕಳಿಸಿದ್ದಾರೆ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಬ್ಬಳನ್ನು ರಾಯಚೂರು ಮೂಲದ ಯುವಕನೊಬ್ಬ ಪ್ರೀತಿಸುತ್ತಿದ್ದ. ಪ್ರೇಮಿಗಳ ದಿನಾಚರಣೆಯಂದು ಆಕೆಗೆ ಸರ್‌ ಪ್ರೈಸ್‌ ನೀಡಬೇಕೆಂಬ ಉದ್ದೇಶದಿಂದ ಆಕೆಗೆ ತಿಳಿಸದೇ ಕಾಲೇಜಿನ ಬಳಿ ಬಂದಿದ್ದ. 

ಕಾಲೇಜಿನ ಬಳಿ ಆ ಯುವತಿ ಮತ್ತೊಬ್ಬ ಯುವಕನೊಡನೆ ನಿಕಟವಾಗಿರುವುದನ್ನು ನೋಡಿ ಯುವಕ ರೊಚ್ಚಿಗೆದ್ದು ಗಲಾಟೆ ಮಾಡಿದ್ದ. ಇದಕ್ಕೆ ಪ್ರತಿಕ್ರಿಯಿಸಿದ ಆ ಯುವತಿ ಈತ ನನ್ನ ಪ್ರಿಯಕರನಲ್ಲ, ಕೇವಲ ಸ್ನೇಹಿತ ಅಷ್ಟೇ ಎಂದು ಸಮಜಾಯಿಷಿ ನೀಡಿದ್ದಳು. ಆದರೆ ತೃಪ್ತನಾಗದ ಭಗ್ನ ಪ್ರೇಮಿ ಅವರಿಬ್ಬರ ಮೊಬೈಲ್‌ ಚೆಕ್‌ ಮಾಡಲು ಮುಂದಾಗಿದ್ದ. ಅವರ ಮೊಬೈಲ್‌ ನ್ನು ಕಸಿದುಕೊಂಡು ಓಡುತ್ತಿದ್ದಂತೆಯೇ ಇಬ್ಬರೂ ಆತನ ಬೆನ್ನೆತ್ತಿದ್ದರು. ಇದನ್ನು ಕಂಡ ಸಂಚಾರಿ ವಿಭಾಗದ ಪೊಲೀಸ್‌ ಶಾಜಿಯಾ ತಬಸ್ಸುಂ ತಾವೂ ಸಹಾ ಅವರನ್ನು ಅಟ್ಟಿಸಿಕೊಂಡು ಹೋಗಿ ಹಿಡಿದಿದ್ದರು. ವಿಚಾರಣೆಯಲ್ಲಿ ಈ ಕಥೆ ಹೊರಬಂದಿದ್ದು, ಮೂವರನ್ನೂ ಕರೆಸಿ ಪೊಲೀಸರು ಬುದ್ದಿಮಾತು ಹೇಳಿ ಕಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments