Webdunia - Bharat's app for daily news and videos

Install App

ಪುತ್ರನನ್ನು ವಿಚಾರಣೆಗೆ ಹಾಜರುಪಡಿಸುವಂತೆ ಸದಾನಂದಗೌಡರಿಗೆ ನೋಟಿಸ್

Webdunia
ಮಂಗಳವಾರ, 2 ಸೆಪ್ಟಂಬರ್ 2014 (12:54 IST)
ಬೆಂಗಳೂರಿನ ಆರ್.ಟಿ. ನಗರ ಪೊಲೀಸರು ಪುತ್ರ ಕಾರ್ತಿಕ್ ಗೌಡರನ್ನು ವಿಚಾರಣೆಗೆ ಹಾಜರುಪಡಿಸುವಂತೆ ಕೇಂದ್ರ ರೈಲ್ವೆ ಸಚಿವ ಸದಾನಂದ ಗೌಡರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡ ವಿರುದ್ಧ ಮೈತ್ರಿಯಾ ವಂಚನೆ ಮತ್ತು ಅತ್ಯಾಚಾರದ ದೂರನ್ನು ನೀಡಿದ ಬಳಿಕ ಪೊಲೀಸರು ಮೈತ್ರಿಯಾ ವಿಚಾರಣೆ ನಡೆಸಿದರು ಮತ್ತು ವೈದ್ಯಕೀಯ ಪರೀಕ್ಷೆಗೆ ಅವರನ್ನು ಒಳಪಡಿಸಿದ್ದರು.

ವೈದ್ಯಕೀಯ ಪರೀಕ್ಷೆ ವರದಿಯಲ್ಲಿ  ಅತ್ಯಾಚಾರ ನಡೆದ ಯಾವುದೇ ಕುರುಹುಗಳು ಪತ್ತೆಯಾಗಿರಲಿಲ್ಲ ಮತ್ತು ಎರಡು ತಿಂಗಳ ಹಿಂದೆ ಲೈಂಗಿಕ ಕ್ರಿಯೆ ನಡೆದಿರುವ ಬಗ್ಗೆ ವರದಿಯಲ್ಲಿ ದೃಢಪಡಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಕಾರ್ತಿಕ್ ಗೌಡ ಅವರ ವೈದ್ಯಕೀಯ ಪರೀಕ್ಷೆ ನಡೆಸುವುದಕ್ಕಾಗಿ ಅವರಿಗೆ ನೋಟಿಸ್ ನೀಡಿದ್ದರೂ ಅವರು ಪೊಲೀಸರ ಎದುರು ಹಾಜರಾಗದಿರುವುದರಿಂದ ಕಾರ್ತಿಕ್ ತಂದೆ ಸದಾನಂದ ಗೌಡರಿಗೇ ಆರ್. ಟಿ.ನಗರ ಪೊಲೀಸರು ನೋಟಿಸ್ ಜಾರಿ ಮಾಡಿ ಪುತ್ರನನ್ನು ಹಾಜರುಪಡಿಸುವಂತೆ ತಿಳಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ