Select Your Language

Notifications

webdunia
webdunia
webdunia
webdunia

ಪೊಲೀಸ್ ಬಿಗಿ ಪೊಲೀಸ್ ಬಂದೋಬಸ್ತ್

ಪೊಲೀಸ್ ಬಿಗಿ ಪೊಲೀಸ್ ಬಂದೋಬಸ್ತ್
ಬೆಂಗಳೂರು , ಶುಕ್ರವಾರ, 29 ಅಕ್ಟೋಬರ್ 2021 (16:07 IST)
ಸ್ಯಾಂಡಲ್ ವುಡ್ ನ ಪವರ್*ಪುನೀತ್ ರಾಜ್ ಕುಮಾರ್ ಇನ್ನಿಲ್ಲ ಎಂಬ ಸುದ್ದಿ ಹರಡುತ್ತಿದ್ದಂತೆ , ವಿಕ್ರಂ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಆಸ್ಪತ್ರೆ ಬಳಿ ಸಾವಿರಾರು ಅಭಿಮಾನಿಗಳು ಅದಾಗಲೇ ಜಮಾಯಿಸಿದ್ದಾರೆ. ಪುನೀತ್ ಅಭಿಮಾನಿಗಳನ್ನು ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಲಾಗಿದೆ. ಆರಂಭದಲ್ಲಿ ಒಂದು ಕೆಎಸ್ ಆರ್ಪಿ ಪಡೆ ನಿಯೋಜಿಸಿದ್ದ ಪೊಲೀಸರು ಆ ಬಳಿಕ ನಾಲ್ಕು ತುಕಡಿ ಪೊಲೀಸರನ್ನು ರವಾನಿಸಿದ್ದಾರೆ. ಪುನೀತ್ ಅವರ ಸದಾಶಿವನಗರ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿದ್ದು, ಹೆಚ್ಚಿನ ಪೊಲೀಸ್ ಬಂದೋ ಬಸ್ತ್ ಏರ್ಪಸಲಾಗಿದೆ. ಆಸ್ಪತ್ರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್, ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ಪುನೀತ್ ರಾಜ್ ಕುಮಾರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ