Webdunia - Bharat's app for daily news and videos

Install App

ಎಂಇಎಸ್ ಜತೆ ಪೊಲೀಸರ ಶಾಮೀಲು: ನೇಕಾರರು ಅರೆ ಬೆತ್ತಲೆ ಪ್ರತಿಭಟನೆ

Webdunia
ಶುಕ್ರವಾರ, 23 ಮಾರ್ಚ್ 2018 (17:43 IST)
ನಗರದಲ್ಲಿ ಮಾ. 22ರಂದು ನಡೆದಿದ್ದ ದೇವರ ದಾಸಿಮಯ್ಯ ಜಯಂತಿ ವೇಳೆ ವಡಗಾವಿ ರಸ್ತೆಯೊಂದಕ್ಕೆ ಅಳವಡಿಸಲಾಗಿದ್ದ ಕನ್ನಡ ನಾಮಫಲಕವನ್ನು ಪೊಲೀಸರು ಕಿತ್ತು ಹಾಕಿರುವ ಕ್ರಮ ಖಂಡಿಸಿ ನೇಕಾರರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಎಂಇಎಸ್ ಜತೆಗೆ ಪೊಲೀಸರು ಸಹ ಕೈ ಜೋಡಿಸಿದ್ದಾರೆ ಎಂದು ದೂರಿರುವ ಸರ್ವೋದಯ ಸ್ವಯಂ ಸೇವಾ ಸಂಘಟನೆ ಹಾಗೂ ನೇಕಾರರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕನ್ನಡ ಹೋರಾಟಗಾರ ಶ್ರೀನಿವಾಸ ತಾಳೂಕರ ಹಾಗೂ ಹಿರಿಯ ಹೋರಾಟಗಾರ ರಾಮಚಂದ್ರ ಢವಳಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾರವು ನೇಕಾರರು ಮತ್ತು ಕನ್ನಡಿಗರಿಗೆ ತೀವ್ರ ಅನ್ಯಾಯ ಮಾಡಿದೆ ಎಂದು ಸರಕಾರದ ವಿರುದ್ಧ  ಘೋಷಣೆ ಕೂಗಿ ಬಾಯಿ ಬಡಿದುಕೊಂಡು ಕಿಡಿ ಕಾರಿದರು.
 
ಸಮಸ್ಯೆಗೆ ಪರಿಹಾರ ಮತ್ತು ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಭರವಸೆವನ್ನು ಡಿಸಿಪಿ ಮಹಾನಿಂಗ ನಂದಗಾವಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ