Select Your Language

Notifications

webdunia
webdunia
webdunia
webdunia

ಸಂಸದ ಅನಂತ್ ಕುಮಾರ್ ಹೆಗಡೆ ನಾಪತ್ತೆ: ಬಂಧನಕ್ಕೆ ಪೊಲೀಸರ ಬಲೆ

ಸಂಸದ ಅನಂತ್ ಕುಮಾರ್ ಹೆಗಡೆ ನಾಪತ್ತೆ: ಬಂಧನಕ್ಕೆ ಪೊಲೀಸರ ಬಲೆ
ಶಿರಸಿ , ಬುಧವಾರ, 11 ಜನವರಿ 2017 (19:42 IST)
ವೈದ್ಯರ ಮೇಲೆ ಹಲ್ಲೆ ಮಾಡಿ ಗೂಂಡಾವರ್ತನೆ ತೋರಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ನಾಪತ್ತೆಯಾಗಿದ್ದು, ಸಂಸದರ ಬಂಧನಕ್ಕೆ ಶಿರಸಿ ಪೊಲೀಸರು ಬಲೆ ಬೀಸಿದ್ದಾರೆ. 
ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಅವರ ತಾಯಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಸಂಸದರು ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಇತರ ರೋಗಿಗಳನ್ನು ವೈದ್ಯರು ಪರಿಶೀಲಿಸುತ್ತಿದ್ದರು. ಹೀಗಾಗಿ ಸಂಸದರ ತಾಯಿಗೆ ಚಿಕಿತ್ಸೆ ನೀಡಲು ತಡವಾದ ಕಾರಣ ಸಂಸದರ ಗರಂ ಆಗಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. 
 
ವೈದ್ಯರಾದ ಮಧುಕೇಶ್ವರ್ ಹಾಗೂ ಬಾಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇಬ್ಬರೂ ವೈದ್ಯರಿಗೆ ರಕ್ತ ಬರುವಂತೆ ಹಲ್ಲೆ ಮಾಡಿ ಗೂಂಡಾವರ್ತನೆ ತೋರಿದ್ದರು.
 
ಗೂಂಡಾವರ್ತನೆ ತೋರಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಶಿರಸಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ  ಸ್ವಂ ಪ್ರೇರಿತ ದೂರು ದಾಖಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಮಾನತಿಗೆ ಹೆದರುವ ಪ್ರಶ್ನೆಯೇ ಇಲ್ಲ: ಬಿಜೆಪಿಗೆ ಸೆಡ್ಡುಹೊಡೆದ ಮಾಜಿ ಮೇಯರ್