Webdunia - Bharat's app for daily news and videos

Install App

ಚಿಕ್ಕಲ್ಲಸಂದ್ರ ಕೆರೆಯ 12 ಎಕರೆ ಒತ್ತುವರಿ ತೆರವಿಗೆ ಪೊಲೀಸರ ಬಲಪ್ರಯೋಗ

Webdunia
ಶುಕ್ರವಾರ, 7 ನವೆಂಬರ್ 2014 (12:52 IST)
ಪದ್ಮನಾಭನಗರದ ಚಿಕ್ಕಲ್ಲಸಂದ್ರ ಕೆರೆಗೆ ಸಂಬಂಧಿಸಿದಂತೆ ಒತ್ತುವರಿಯಾದ ಜಾಗವನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮಾಡಲಾಗಿದೆ. ಸುಮಾರು 12 ಎಕರೆ 40 ಗುಂಟೆ ಜಾಗ ಒತ್ತುವರಿಯಾಗಿದ್ದು, ಬೆಂಗಳೂರು ನಗರ ಡಿಸಿ ಶಂಕರ್ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು. 12 ಎಕರೆಯಲ್ಲಿ ಕಟ್ಟಿದ್ದ ಮನೆಗಳು ಮತ್ತು ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು.

ಒತ್ತುವರಿ ತೆರವಿಗೆ ಜನರು ಪ್ರತಿಭಟನೆ ವ್ಯಕ್ತಪಡಿಸಿದ್ದರೂ, ಪೊಲೀಸರು ಬಲಪ್ರಯೋಗದಿಂದ ಒತ್ತುವರಿ ತೆರವು ಮಾಡಿದರು. ಒತ್ತುವರಿ ತೆರವು ಮಾಡದಂತೆ ಕೆಲವರು ಕೋರ್ಟ್ ಪತ್ರಗಳನ್ನು ತೋರಿಸಿದರೂ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ತೆರವು ಮಾಡಿಸಲಾಯಿತು.

 ಈಗಾಗಲೇ ಒತ್ತುವರಿದಾರರಿಗೆ ನೋಟಿಸ್ ನೀಡಿದ್ದರೂ ಅವರು ತೆರವು ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಜೆಸಿಬಿ ಯಂತ್ರಗಳ ಮೂಲಕ ಒತ್ತುವರಿಯಾಗಿದ್ದ ಮನೆ ಮತ್ತು ಕಟ್ಟಡಗಳನ್ನು ನೆಲಸಮ ಮಾಡಲಾಯಿತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments