Webdunia - Bharat's app for daily news and videos

Install App

ದರ್ಶನ್‌, ಪವಿತ್ರಾರನ್ನು ಸಂಜೆ 4.30ಕ್ಕೆ ಕೋರ್ಟ್‌ಗೆ ಹಾಜರುಪಡಿಸಲಿರುವ ಪೊಲೀಸರು

Sampriya
ಮಂಗಳವಾರ, 11 ಜೂನ್ 2024 (16:01 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧನಕ್ಕೊಳಗಾದ ನಟ ದರ್ಶನ್‌ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಅವರನ್ನು ಇಂದು ಸಂಜೆ 4.30ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ/

ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಸೇರಿದಂತೆ 13 ಆರೋಪಿಗಳಿಗೆ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಬೌರಿಂಗ್‌ ಆಸ್ಪತ್ರೆಗೆ ಆರೋಪಿಗಳನ್ನು ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಪೊಲೀಸರು ನಿರ್ಧರಿಸಿದ್ದರು. ಆದರೆ, ಭದ್ರತೆ ದೃಷ್ಟಿಯಿಂದ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ವೈದ್ಯರನ್ನು ಕರೆಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಎಲ್ಲ ಆರೋಪಿಗಳನ್ನು ಸಂಜೆ 4.30ಕ್ಕೆ ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಪೊಲೀಸರು ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ. ಬಂಧಿತರ ಪೈಕಿ ಹೆಚ್ಚಿನವರು ದರ್ಶನ್‌ ಅವರ ಬಾಡಿಗಾರ್ಡ್‌ ಆಗಿದ್ದಾರೆ.

ದರ್ಶನ್‌ ಸ್ನೇಹಿತ ವಿ.ವಿನಯ್, ದರ್ಶನ್‌ ಮ್ಯಾನೇಜರ್‌ ಆರ್.ನಾಗರಾಜು, ಎಂ.ಲಕ್ಷ್ಮಣ್​, ಎಸ್​.ಪ್ರದೋಶ್​, ಕೆ.ಪವನ್, ದೀಪಕ್​ ಕುಮಾರ್, ನಂದೀಶ್​, ಕಾರ್ತಿಕ್​, ನಿಖಿಲ್ ನಾಯಕ್​, ಕೇಶವಮೂರ್ತಿ, ರಾಘವೇಂದ್ರ ಅಲಿಯಾಸ್​ ರಾಘು ಬಂಧಿತ ಇತರೆ ಆರೋಪಿಗಳು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಸರ್ಜಿಕಲ್ ಸ್ಟ್ರೈಕ್ ವೇಳೆ ಸಾಕ್ಷ್ಯ ಕೇಳಿದ್ದವರಿಗೆ ಈ ಬಾರಿ ವಿಡಿಯೋ ಸಾಕ್ಷಿ ಇಲ್ಲಿದೆ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

ಮುಂದಿನ ಸುದ್ದಿ
Show comments