Webdunia - Bharat's app for daily news and videos

Install App

ದರ್ಶನ್‌, ಪವಿತ್ರಾರನ್ನು ಸಂಜೆ 4.30ಕ್ಕೆ ಕೋರ್ಟ್‌ಗೆ ಹಾಜರುಪಡಿಸಲಿರುವ ಪೊಲೀಸರು

Sampriya
ಮಂಗಳವಾರ, 11 ಜೂನ್ 2024 (16:01 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧನಕ್ಕೊಳಗಾದ ನಟ ದರ್ಶನ್‌ ಮತ್ತು ಅವರ ಆಪ್ತೆ ಪವಿತ್ರಾ ಗೌಡ ಅವರನ್ನು ಇಂದು ಸಂಜೆ 4.30ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ/

ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಸೇರಿದಂತೆ 13 ಆರೋಪಿಗಳಿಗೆ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಬೌರಿಂಗ್‌ ಆಸ್ಪತ್ರೆಗೆ ಆರೋಪಿಗಳನ್ನು ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಪೊಲೀಸರು ನಿರ್ಧರಿಸಿದ್ದರು. ಆದರೆ, ಭದ್ರತೆ ದೃಷ್ಟಿಯಿಂದ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ವೈದ್ಯರನ್ನು ಕರೆಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಎಲ್ಲ ಆರೋಪಿಗಳನ್ನು ಸಂಜೆ 4.30ಕ್ಕೆ ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಪೊಲೀಸರು ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಕೇಳುವ ಸಾಧ್ಯತೆಯಿದೆ. ಬಂಧಿತರ ಪೈಕಿ ಹೆಚ್ಚಿನವರು ದರ್ಶನ್‌ ಅವರ ಬಾಡಿಗಾರ್ಡ್‌ ಆಗಿದ್ದಾರೆ.

ದರ್ಶನ್‌ ಸ್ನೇಹಿತ ವಿ.ವಿನಯ್, ದರ್ಶನ್‌ ಮ್ಯಾನೇಜರ್‌ ಆರ್.ನಾಗರಾಜು, ಎಂ.ಲಕ್ಷ್ಮಣ್​, ಎಸ್​.ಪ್ರದೋಶ್​, ಕೆ.ಪವನ್, ದೀಪಕ್​ ಕುಮಾರ್, ನಂದೀಶ್​, ಕಾರ್ತಿಕ್​, ನಿಖಿಲ್ ನಾಯಕ್​, ಕೇಶವಮೂರ್ತಿ, ರಾಘವೇಂದ್ರ ಅಲಿಯಾಸ್​ ರಾಘು ಬಂಧಿತ ಇತರೆ ಆರೋಪಿಗಳು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments