Webdunia - Bharat's app for daily news and videos

Install App

ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ: ಸಿಎಂ ಇಬ್ರಾಹಿಂ

Webdunia
ಮಂಗಳವಾರ, 27 ಜುಲೈ 2021 (17:20 IST)
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ 75 ವರ್ಷ ಆಗಿದೆ ಎಂದು ಕೇಶವಕೃಪದಲ್ಲಿ ಇರುವವವರು ಕಾರಣ ಕೊಡುತ್ತಾರೆ. ಆದರೆ ಕೇರಳದಲ್ಲಿ 80 ವರ್ಷ ದಾಟಿದ ವ್ಯಕ್ತಿಯನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಾರೆ ಎಂದು ಲೇವಡಿ ಮಾಡಿದರು.
ನಾನು ಈ ಹಿಂದೆ ನಮ್ಮ ಮನೆಯಲ್ಲಿ ಪ್ರೆಸ್ ಮೀಟ್ ಕರೆದಾಗ ನಾನು ಹೇಳಿದ್ದೆ ರಾಜಕೀಯ ಇತಿಹಾಸ ಬದಲಾವಣೆ ಆಗುತ್ತೆ ಅಂತ. ಅದು ನಿಜವಾಗಿದೆ ಈಗ. ರಾಜೀನಾಮೆ ಈ ರೀತಿ ಪಡೆಯುವುದು ಸತ್ ಸಂಪ್ರದಾಯ ಅಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಜೂನ್, ಜುಲೈ, ಆಗಸ್ಟ್ ನಲ್ಲಿ ರಾಜಕೀಯ ವಿಕೇಂದ್ರೀಕೃತ ಆಗುತ್ತೆ ಎಂದು ಹೇಳಿದ್ದೆ. ಯಡಿಯೂರಪ್ಪ ಅವರನ್ನ ಪರಿಗಣಿಸಲ್ಲ. ಕೇಶವಕೃಪ, ಬಸವ ಕೃಪ ಅಂತ ಆಗಿದೆ. ಆದರೆ ಇಲ್ಲಿ ವಯಸ್ಸಾಯ್ತು ಅಂತ ಕಿತ್ತು ಹಾಕಿದ್ದಾರೆ. ಆರುವರೆ ಕೋಟಿ ಜನರು ಈ ಬದಲಾವಣೆ ಸಹಿಸಲ್ಲ. ಏಕಾಏಕಿ ರಾಜಕೀಯ ಒತ್ತಡ ಹಾಕಿ ಪಡೆಯೋದು ಸರಿಯಲ್ಲ ಎಂದು ಅವರು ಹೇಳಿದರು.
ಅಕ್ಟೋಬರ್ ನಲ್ಲಿ ಅಲ್ಪ ಸಂಖ್ಯಾತರ ಸಭೆ ನಡೆಯಲಿದೆ. ಅಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಏನು ಕ್ರಮ ಕೈಗೊಳ್ಳಬೇಕು ಅನ್ನೋದನ್ನ ಡಿಸೈಡ್ ಮಾಡ್ತೀವಿ. ಸೆಪ್ಟೆಂಬರ್ ನಲ್ಲಿ ವಲಸೆ ಸಚಿವರ ಸ್ಥಿತಿ ಶೋಚನೀಯ ಆಗಲಿದೆ ಎಂದು ಇಬ್ರಾಹಿಂ ಸುಳಿವು ನೀಡಿರು.
ಕನ್ನಡಿಗರು ನೀಡುವವರು, ಬೇಡುವವರಲ್ಲ ಎಂಬುದಕ್ಕೆ ಯಡಿಯೂರಪ್ಪ ರಾಜ್ಯಪಾಲರ ಸ್ಥಾನ ನಿರಾಕರಿಸಿರುವುದೇ ಕಾರಣ. ಯಡಿಯೂರಪ್ಪ ಮೇಲೆ ಆರೋಪ, ಪ್ರತ್ಯಾರೋಪ ಇರಬಹುದು ಅದು ಬೇರೆ. ಯಡಿಯೂರಪ್ಪ ಒರಿಜಿನಲ್ ಕಾಪಿ ಇಲ್ಲ, ಝೆರಾಕ್ಸ್ ತಗೊಂಡ್ ಏನು ಮಾಡೋದು? ಸಿಎಂ ಯಾರೇ ಆಗಲಿ, ಅದನ್ನ ನಮ್ಮ ಜನ ಒಪ್ಪಲ್ಲ.  ರಾಜ್ಯದಲ್ಲಿ ಹೊಸ ಪರ್ವ ಶುರುವಾಗಲಿದೆ. ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಬರಲಿಲ್ಲ. ಮಠದ ದಾಸೋಹಿ ನಾನು, ಯಡಿಯೂರಪ್ಪ ಭೇಟಿ ಆಗಲು ಬಂದೆ. ನಮ್ಮ ನಾಡು, ನಮ್ಮ ನೆಲ, ನಮ್ಮ ಜಲ ನಮ್ಮ ನಾಯಕನನ್ನ ಆಯ್ಕೆ ಮಾಡಬೇಕಿದೆ.  ಸೆಪ್ಟೆಂಬರ್ ನಂತರ ಎಲ್ಲವೂ ಗೊತ್ತಾಗಲಿದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments