Select Your Language

Notifications

webdunia
webdunia
webdunia
webdunia

ಜೆಡಿಎಸ್, ಕಾಂಗ್ರೆಸ್ ಮಧ್ಯ ಘರ್ಷಣೆ: ಇಬ್ಬರು ಜೆಡಿಎಸ್ ಕಾರ್ಯಕರ್ತರು ಬಲಿ!

ಜೆಡಿಎಸ್, ಕಾಂಗ್ರೆಸ್ ಮಧ್ಯ ಘರ್ಷಣೆ: ಇಬ್ಬರು ಜೆಡಿಎಸ್ ಕಾರ್ಯಕರ್ತರು ಬಲಿ!
ಮಂಡ್ಯ , ಸೋಮವಾರ, 26 ಡಿಸೆಂಬರ್ 2016 (11:22 IST)
ಬ್ಯಾನರ್ ಕಟ್ಟುವ ವಿಚಾರಕ್ಕಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಡುವೆ ನಡೆದ ಮಾತಿನ ಚಕಮಕಿ ತಾರಕಕ್ಕೇರಿ ಇಬ್ಬರು ಜೆಡಿಎಸ್ ಕಾರ್ಯಕರ್ತರ ಸಾವಿನಲ್ಲಿ ಅಂತ್ಯವಾದ ಘಟನೆ ಮಂಡ್ಯದಲ್ಲಿ ನಡೆದಿದೆ.
ಜೆಡಿಎಸ್ ಕಾರ್ಯಕರ್ತರಾದ ನಂದೀಶ್ ಹಾಗೂ ಮುತ್ತುರಾಜ್ ಘರ್ಷಣೆಯಲ್ಲಿ ಬಲಿಯಾಗಿದ್ದು, ಮೂರಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. 
 
ಬ್ಯಾನರ್ ಕಟ್ಟುವ ವಿಚಾರಕ್ಕಾಗಿ ಹೊತ್ತಿ ಉರಿದ ಮಂಡ್ಯ ಜಿಲ್ಲೆಯ ತೊಪ್ಪನಹಳ್ಳಿಯಲ್ಲಿ ಸದ್ಯ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಘಟನೆಗೆ ಕಾರಣರಾದ ಕೆಲವರನ್ನು ಮದ್ದೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.  
 
ಘಟನೆಗೆ ಕಾರಣರಾದವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಂಡು ಗ್ರಾಮದಲ್ಲಿ ಪುನಃ ಶಾಂತಿ ಸ್ಥಾಪಿಸಬೇಕೆಂದು ತೊಪ್ಪನಹಳ್ಳಿ ಗ್ರಾಮಸ್ಥರು ಮನವಿ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸೋನಿಯಾ, ರಾಹುಲ್‌ಗೆ ಮುಳುವಾಗುತ್ತಾ ಕೋರ್ಟ್ ತೀರ್ಪು?