Select Your Language

Notifications

webdunia
webdunia
webdunia
webdunia

ರಾಜಕೀಯ ಷಡ್ಯಂತ್ರದಿಂದ ಯಡಿಯೂರಪ್ಪ ಜೈಲಿಗೆ : ರೇಣುಕಾಚಾರ್ಯ

ರಾಜಕೀಯ ಷಡ್ಯಂತ್ರದಿಂದ ಯಡಿಯೂರಪ್ಪ ಜೈಲಿಗೆ : ರೇಣುಕಾಚಾರ್ಯ
ಬೆಂಗಳೂರು , ಗುರುವಾರ, 23 ಫೆಬ್ರವರಿ 2017 (16:20 IST)
ರಾಜಕೀಯ ಷಡ್ಯಂತ್ರದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗಿ ಬರುವಂತಾಗಿದೆ. ರಾಜ್ಯದ ಜನತೆಗೆ ಸತ್ಯ ಸಂಗತಿ ತಿಳಿದಿದ್ದರಿಂದ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು ಯಡಿಯೂರಪ್ಪ ಸಿಎಂ ಆಗಲಿದ್ದಾರೆ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರದಿಂದ ಕಾಂಗ್ರೆಸ್ ಮುಖಂಡರೇ ಬೇಸತ್ತಿರುವುದುರಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕುಮಾರಸ್ವಾಮಿ ಕೂಡಾ ವಚನ ಭ್ರಷ್ಟರಾಗಿದ್ದಾರೆ ಎಂದು ಆರೋಪಿಸಿದರು.
 
ರಾಜ್ಯದ ಅತ್ಯಂತ ಪ್ರಭಾವಿ ರಾಜಕಾರಣಿಯಾಗಿರುವ ಮಾಜಿ ಸಿಎಂ ಯಡಿಯೂರಪ್ಪರನ್ನು ಮಾನಸಿಕ ಅಸ್ವಸ್ಥರು ಎಂದು ದಿನೇಶ್ ಗುಂಡೂರಾವ್ ಉಗ್ರಪ್ಪ ಆರೋಪಿಸಿದ್ದಾರೆ. ಆದರೆ, ಸತ್ಯ ಸಂಗತಿ ಎಂದರೆ ದಿನೇಶ್ ಮತ್ತು ಉಗ್ರಪ್ಪ ಅವರೇ ಹುಚ್ಚರಾಗಿದ್ದಾರೆ ಎಂದು ಕಿಡಿಕಾರಿದರು. 
 
ಕಾಂಗ್ರೆಸ್ ಪಕ್ಷ ಭ್ರಷ್ಟರ ಪಕ್ಷವಾಗಿದೆ. ಐಟಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಸಚಿವ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಮನೆಗಳಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ನೀಡಿದ ಬಗ್ಗೆ ಕಾಂಗ್ರೆಸ್ ಮುಖಂಡರೇ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದ್ದಾರೆ ಎಂದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

33 ಹಾಲಿ ಶಾಸಕರಿಗೆ ಟಿಕೆಟ್ ಖಚಿತ: ಕುಮಾರಸ್ವಾಮಿ