ಕಬ್ಬು ಬೆಳೆಗಾರರಿಗೆ ಭಾರೀ ಮೊತ್ತದ ಹಣ ಬಾಕಿ ಉಳಿಸಿಕೊಂಡಿದ್ದಾರಾ ಈ ರಾಜಕಾರಣಿಗಳು?

Webdunia
ಶುಕ್ರವಾರ, 23 ನವೆಂಬರ್ 2018 (09:48 IST)
ಬೆಂಗಳೂರು: ಬಾಕಿ ಹಣ ಕೊಡುವಂತೆ ರೈತರು ಬೀದಿಗಿಳಿದು ಪ್ರತಿಭಟನೆ ಮಾಡಿದ ನಂತರ ಎಚ್ಚೆತ್ತುಕೊಂಡ ಸರ್ಕಾರ ನಿನ್ನೆ ಕಾರ್ಖಾನೆ ಮಾಲಿಕರ ಜತೆ ಸಭೆ ನಡೆಸಿತು.

ವಿಶೇಷವೆಂದರೆ ಕಾರ್ಖಾನೆ ಮಾಲಿಕರಲ್ಲಿ ಹೆಚ್ಚಿನವರು ಶಾಸಕರು, ಸಚಿವರೇ ಇದ್ದಾರೆ. ಇವರ ಪೈಕಿ ಬೆಳಗಾವಿಯ ಪ್ರಭಾವಿ ಶಾಸಕ ರಮೇಶ್ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ರೈತರಿಗೆ 4 ಲಕ್ಷಕ್ಕೂ ಅಧಿಕ ಹಣ ಬಾಕಿ ಪಾವತಿಸಬೇಕಿದೆ ಎನ್ನಲಾಗಿದೆ.

ಇಂದು ಬೆಳಗಾವಿಯ ಡಿಸಿ ಕಚೇರಿ ಮುಂದೆ ರೈತರು ಬಾಕಿ ಕೊಡಿಸುವಂತೆ ಪ್ರತಿಭಟನೆ ನಡೆಸುತ್ತಿದ್ದು, ಜಾರಕಿಹೊಳಿ ಸಹೋದರರ ಒಡೆತನದ ಕಾರ್ಖಾನೆ ತಮಗೆ ಬಾಕಿ ಹಣ ನೀಡಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಡಿಸಿ ಕಚೇರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಅವರು ದೂರಿದ್ದಾರೆ.

ಆದರೆ ನಿನ್ನೆ ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ಪಾಲ್ಗೊಂಡಿದ್ದ ಜಾರಕಿಹೊಳಿ ಸಹೋದರರು ತಮ್ಮ ಕಾರ್ಖಾನೆಗಳಲ್ಲಿ ರೈತರಿಗೆ ನೀಡಬೇಕಾದ ಬಾಕಿಯನ್ನು ಮುಂಬರುವ ಬೆಳಗಾವಿ ಅಧಿವೇಶನಕ್ಕೆ ಮೊದಲು ನೀಡುವುದಾಗಿ ಭರವಸೆ ನೀಡಿದ್ದಾರೆ. ನುಡಿದಂತೆ ನಡೆಯದೇ ಇದ್ದರೆ ಜಾರಕಿಹೊಳಿ ಸಹೋದರರಿಗೆ ಮಾತ್ರವಲ್ಲ, ಕಾರ್ಖಾನೆ ಮಾಲಿಕರೂ ಆಗಿರುವ ಎಲ್ಲಾ ರಾಜಕಾರಣಿಗಳಿಗೆ ಮುಂದಿನ ಅಧಿವೇಶನದಲ್ಲಿ ಅದರ ಬಿಸಿ ಮುಟ್ಟಿಸಲು ರೈತರು ಸಜ್ಜಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments