ಸಿಎಂ ವಿರುದ್ಧ ಅನಾಗರಿಕ ಭಾಷೆ ಬಳಕೆ ಬೇಡ: ಪೂಜಾರಿಗೆ ಸಚಿವ ರಾಯರೆಡ್ಡಿ ಸಲಹೆ

Webdunia
ಗುರುವಾರ, 2 ಫೆಬ್ರವರಿ 2017 (16:29 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅನಾಗರಿಕತೆಯ ಭಾಷೆ ಬಳಸುವುದು ಸರಿಯಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ಜನಾರ್ದನ ಪೂಜಾರಿ ಅನಾಗರಿಕರಂತೆ ಟೀಕೆ ಮಾಡುವುದು ಸರಿಯಲ್ಲ. ಏನೇ ಅಸಮಾಧಾನ ಇರಲಿ, ಉತ್ತಮ ಪದ ಬಳಕೆ ಮಾಡಿ ಹೇಳಿಕೆ ನೀಡಬೇಕು. ಪಕ್ಷದ ಹಿರಿಯ ಮುಖಂಡರಾಗಿರುವ ಪೂಜಾರಿ ಅವರು ಮುಖ್ಯಮಂತ್ರಿಗಳ ವಿರುದ್ಧ ಕೆಟ್ಟ ಪದ ಬಳಸಿರುವುದಕ್ಕೆ ನನ್ನ ವಿರೋಧ ಇದೆ ಎಂದರು. 
 
ಮಾಜಿ ಮುಖ್ಯಮಂತ್ರಿ ಎಂ.ಎಂ.ಕೃಷ್ಣ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅವರ ಬಗ್ಗೆ ಅಪಾರ ಗೌರವ ಇದೆ. ಅವರ ಮನವೊಲಿಸಲು ಕಾಂಗ್ರೆಸ್ ಹೈಕಮಾಂಡ್ ಪ್ರಯತ್ನ ನಡೆಸುತ್ತೇದೆ. ಕೃಷ್ಣ ಅವರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರಹಂಕಾರ ಮಿತಿಮೀರಿದೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಹೇಳಿಕೆ ನೀಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ವಿದೇಶಕ್ಕೆ ಹೋಗಲ್ವಾ, ರಾಹುಲ್ ಹೋದ್ರೆ ತಪ್ಪೇನು ಎಂದ ಮಲ್ಲಿಕಾರ್ಜುನ ಖರ್ಗೆ: ಯಾಕೆ ಹೋಗ್ತಾರೆ ಎಂದ ನೆಟ್ಟಿಗರು

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ಮುಂದಿನ ಸುದ್ದಿ
Show comments