ಅನ್ಯಭಾಗ್ಯ ಕಡಿತದಿಂದ ಬಡಜನತೆಗೆ ತೊಂದರೆ: ಸಂಸದ ಡಿಕೆ ಸುರೇಶ್

Webdunia
ಗುರುವಾರ, 5 ಜುಲೈ 2018 (18:48 IST)
ರಾಜ್ಯ ಸರಕಾರ ಅನ್ನಭಾಗ್ಯ ಯೋಜನೆ ಕಡಿತ ಮಾಡಿದ್ದರಿಂದ ಬಡಜನತೆಗೆ ತೊಂದರೆಯಾಗಲಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ತುಮಕೂರು ಜಿಲ್ಲೆಯ ನೊಣವಿನಕೆರೆಯಲ್ಲಿ ಮಾತನಾಡಿರುವ ಅವರು, ಅನ್ನಭಾಗ್ಯ ಯೋಜನೆ ಕುರಿತು ಪುನರ್ ಪರಿಶೀಲನೆ ಮಾಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಒತ್ತಾಯಿಸುವುದಾಗಿ ತಿಳಿಸಿದರು. 

 
ರೈತರ ಸಾಲಮನ್ನಾ ಮಾಡಿದ್ದು ಸ್ವಾಗತಾರ್ಹ ವಿಷಯವಾಗಿದೆ. ಅಲ್ಲದೇ ರಾಜ್ಯದ ರೈತರ ನಿರೀಕ್ಷೆ ಪೂರೈಕೆಗಾಗಿ ಬೆಲೆ ಏರಿಕೆ ಅನಿವಾರ್ಯವಾಗಲಿದೆ. ಪೆಟ್ರೋಲ್, ಡೀಸೇಲ್, ವಿದ್ಯುತ್ ದರ ಅನಿವಾರ್ಯವಾಗಿ ಏರಿಕೆ ಆಗಲಿದೆ. ಕೇಂದ್ರ ಸರಕಾರ ಸರಿಯಾಗಿ ಅನುದಾನ ಕೊಡದ ಕಾರಣದಿಂದ ಬೆಲೆ ಏರಿಕೆ ಮಾಡಬೇಕಾಗಿದೆ ಎಂದರು. 

ರಾಜ್ಯದ ಸಂಪನ್ಮೂಲ ಕ್ರೂಢಿಕರಣ ಮಾಡುವುದು ಮುಖ್ಯಮಂತ್ರಿಯ ಜವಾಬ್ದಾರಿಯಾಗಿದೆ. ಹಾಗಾಗಿ ಬೆಲೆ ಏರಿಕೆ ಮಾಡಿದ್ದಾರೆ. ಆದರೆ ಅನ್ನಭಾಗ್ಯ ಅಕ್ಕಿ ಪ್ರಮಾಣ ಕಡಿತ ಮಾಡಿರುವುದು ಜನರಿಗೆ ಮಾಡಿರುವ ಅನ್ಯಾಯವಾಗಿದೆ. ಅನುಮೋದನೆ ಸಿಗುವ ಮೊದಲು ಪುನರ್ ಪರಿಶೀಲನೆ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ್ ಒತ್ತಾಯಿಸಿದ್ದಾರೆ.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕನ್ನಡಕ್ಕಿಂತ ಪರಭಾಷೆಗಳಲ್ಲೇ ಇರುವ ಪ್ರಕಾಶ್ ರಾಜ್ ಗೆ ಯಾಕೆ ರಾಜ್ಯೋತ್ಸವ ಪ್ರಶಸ್ತಿ: ನೆಟ್ಟಿಗರ ತರಾಟೆ

ಮುಟ್ಟಾಗಿದ್ದು ನಿಜಾನಾ ಎಂದು ಮಹಿಳೆಯರ ಬಟ್ಟೆ ಬಿಚ್ಚಲು ಹೇಳಿದ ಮೇಲ್ವಿಚಾರಕ

ಕೋರ್ಟ್ ಹೇಳಿದ್ರೂ ಬೆಲೆಯಿಲ್ವಾ: ಪ್ರಿಯಾಂಕ್ ಖರ್ಗೆ ವಿರುದ್ಧ ನೆಟ್ಟಿಗರು ಕಿಡಿ

Karnataka Weather: ಇಂದು ಈ ಜಿಲ್ಲೆಯಲ್ಲಿ ಮಾತ್ರ ಸಣ್ಣ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments