Webdunia - Bharat's app for daily news and videos

Install App

ಯುವತಿಯೊಂದಿಗೆ ಚಕ್ಕಂದ: ಯುವಕರಿಗೆ ಗೂಸಾ

Webdunia
ಸೋಮವಾರ, 23 ಜುಲೈ 2018 (13:53 IST)
ಯುವತಿಯನ್ನ ಕರೆತಂದು ಚಕ್ಕಂದವಾಡುತ್ತಿದ್ದ ಯುವಕರನ್ನ ಪ್ರಶ್ನಿಸಿದ ವಿಚಾರವಾಗಿ ಪರಸ್ಪರ ಹೊಡೆದಾಡಿಕೊಂಡ  ಘಟನೆ ನಡೆದಿದೆ. ಯುವಕರಿಬ್ಬರು ಯುವತಿಯೊಬ್ಬಳನ್ನ ಕರೆತಂದು ಜಮೀನೊಂದರಲ್ಲಿ ಮೋಜುಮಸ್ತಿಯಲ್ಲಿ ತೊಡಗಿದ್ದಾರೆ. ಇದನ್ನ ಜಮೀನಿನ ಮಾಲೀಕ  ಪ್ರಶ್ನಿಸಿದ್ದಾರೆ. ಆಗ ಗಲಾಟೆ ಆಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಯುವಕರಿಬ್ಬರನ್ನ ಹಾಗೂ ಹಲ್ಲೆ ನಡೆಸಿದ ದೊಣ್ಣೆಗಳನ್ನ ವಶಕ್ಕೆ ಪಡೆದಿದ್ದಾರೆ.

ನಂಜನಗೂಡು ತಾಲೂಕಿನ ಹ೦ಡುವಿನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹ೦ಡುವಿನಹಳ್ಳಿ ಗ್ರಾಮದ ಬಳಿ ಯುವಕರಿಬ್ಬರು ಯುವತಿಯೊಬ್ಬಳನ್ನ ಕರೆತಂದು ಜಮೀನೊಂದರಲ್ಲಿ ಮೋಜುಮಸ್ತಿಯಲ್ಲಿ ತೊಡಗಿದ್ದಾರೆ.ಇದನ್ನ ಜಮೀನಿನ ಮಾಲೀಕ ದೇವಣ್ಣ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ಯುವಕರು ತಮ್ಮ ಸ್ನೇಹಿತರನ್ನ ಕರೆಸಿ ಗ್ರಾಮಕ್ಕೆ ನುಗ್ಗಿ ಜಮೀನು ಮಾಲೀಕನ ಮಗ ನಾಗರಾಜು  ಮೇಲೆ ದೊಣ್ಣೆಗಳಿಂದ ಮನಬಂದಂತೆ  ಥಳಿಸಿದ್ದಾರೆ. ಯುವಕರ ಗುಂಪಿನ ವರ್ತನೆಗೆ ಬೇಸತ್ತ ಗ್ರಾಮಸ್ಥರು ರೊಚ್ಚಿಗೆದ್ದು ಯುವಕರಿಗೆ ಥಳಿಸಿದ್ದಾರೆ.

8 ಮಂದಿ ತಂಡದ ಪೈಕಿ 6 ಮಂದಿ ತಪ್ಪಿಸಿಕೊಂಡು ಇಬ್ಬರು ಸಿಕ್ಕಿಬಿದ್ದಿದ್ದಾರೆ. ಮಾಹಿತಿ ಅರಿತ ನಂಜನಗೂಡು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ರಾಮಮಂದಿರದಲ್ಲಿ ಕೂಡಿಹಾಕಿದ್ದ ಇಬ್ಬರು ಯುವಕರನ್ನ ವಶಕ್ಕೆ ಪಡೆದಿದ್ದಾರೆ. ಯುವಕರೊಂದಿಗೆ ಬಂದಿದ್ದ ಯುವತಿ ಸ್ಥಳದಿಂದ ಕಾಲ್ಕಿತ್ತಿದ್ದಾಳೆ. ದಾಂಧಲೆ ನಡೆಸಿದವರು  ದೇವರಸನ ಹಳ್ಳಿಯ ಚಿಕ್ಕಣ್ಣ ಹಾಗೂ ಯೋಗೇಶ್ ಎಂದು ಹೇಳಲಾಗಿದೆ. ಹ೦ಡುವಿನಹಳ್ಳಿ ಗ್ರಾಮಸ್ಥರು ಯುವಕರ ವಿರುದ್ಧ ನಂಜನಗೂಡು  ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments