Webdunia - Bharat's app for daily news and videos

Install App

ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

Webdunia
ಮಂಗಳವಾರ, 3 ಆಗಸ್ಟ್ 2021 (09:26 IST)
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಸಚಿವ ಸಂಪುಟ ವಿಸ್ತರಣೆ ಮಾಡಬೇಕಾದ ಒತ್ತಡ ಹೆಚ್ಚಾಗುತ್ತಿದ್ದು ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯುವ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಆದ್ಯಕ್ಷ ಜೆ.ಪಿ. ನಡ್ಡ ಭೇಟಿ ಮಾಡಿ ಸುದೀರ್ಘವಾದ ಸಮಾಲೋಚನೆ ನಡೆಸಿದ್ದಾರೆ.

ಮಾತುಕತೆ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಗಣಿ ಸಚಿವ ಪ್ರಹ್ಲಾದ್ ಜೋಷಿ ಕೂಡ ಉಪಸ್ಥಿತರಿದ್ದರು. ಹೊಸ ಮಂತ್ರಿ ಮಂಡಳ ಹೇಗಿರಬೇಕು ಎಂದು ಹಲವು ಆಯಾಮಗಳಲ್ಲಿ ಸುದೀರ್ಘವಾಗಿ ಚರ್ಚಿಸಿದ ನಾಯಕರು ನೂತನ ಸಚಿವರ ಪಟ್ಟಿ ಸಿದ್ದ ಮಾಡಿದ್ದು ಆಗಸ್ಟ್  4 ಅಥವಾ ಆಗಸ್ಟ್ 5ರಂದು ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ.
ಜೆ.ಪಿ. ನಡ್ಡ ಭೇಟಿ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ನೀಡಲಾಗಿದೆ. ಎಷ್ಟು ಮಂದಿ ಸಚಿವರಾಗಬೇಕು, ಯಾರು ಇರಬೇಕು? ಎಷ್ಟು ಮಂದಿ ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು? ಎಂಬುದನ್ನು ಹೈಕಮಾಂಡ್ ನಾಯಕರು ನಿರ್ಧರಿಸಲಿದ್ದಾರೆ. ನಾಳೆ ಸಂಜೆಯೊಳಗೆ ಪಟ್ಟಿಗೆ ಹೈಕಮಾಂಡಿನ ಮುದ್ರೆ ಬೀಳಲಿದೆ. ಬಳಿಕ ಕೂಡಲೇ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಅವರನ್ನು ಭೇಟಿ ಮಾಡಲೆಂದು ಭಾನುವಾರ ರಾತ್ರಿಯೇ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿಢೀರನೆ ದೆಹಲಿಗೆ ಬಂದಿದ್ದರು. ಆದರೆ ಭಾನುವಾರ ರಾತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜೆ.ಪಿ. ನಡ್ಡ ಅವರ ಭೇಟಿಗೆ ಸಮಯಾವಕಾಶ ಸಿಕ್ಕಿರಲಿಲ್ಲ. ಆದುದರಿಂದ ಬಸವರಾಜ ಬೊಮ್ಮಾಯಿ ಭಾನುವಾರ ರಾತ್ರಿ ಅಜ್ಞಾತ ಸ್ಥಳಕ್ಕೆ ತೆರಳಿ ಮಧ್ಯರಾತ್ರಿ 1ಗಂಟೆಯ ಬಳಿಕ ಕರ್ನಾಟಕ ಭವನಕ್ಕೆ ಆಗಮಿಸಿದರು.
ಸೋಮವಾರ ಮಧ್ಯಾಹ್ನ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಾಲೋಚನೆ ನಡೆಸಿದರು. ಇದಾದ ಮೇಲೆ ರಾತ್ರಿ ಜೆ.ಪಿ. ನಡ್ಡ ಮನೆಯಲ್ಲಿ ನಡೆದ ಸಭೆಯಲ್ಲಿ ನೂತನ ಮಂತ್ರಿ ಮಂಡಳದ ರೂಪು ರೇಷೆಗಳು ಸಿದ್ದಗೊಂಡವು. ಜೆ.ಪಿ. ನಡ್ಡ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏಳು ಪ್ರಮುಖ ಅಂಶಗಳ ಹಿನ್ನಲೆಯಲ್ಲಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ಆ ಅಂಶಗಳು ಕೆಳಕಂಡಂತಿವೆ.
1) ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳಬೇಕೋ ಬೇಡವೋ?
2) ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ?3) ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಬಂದು ಬಿಜೆಪಿ ಸರ್ಕಾರ ರಚನೆ ಆಗಲು ಕಾರಣಕರ್ತರಾದ ವಲಸೆ ಸಚಿವರ ಪೈಕಿ ಎಲ್ಲರಿಗೂ ಸಚಿವ ಸ್ಥಾನ ನೀಡಬೇಕೋ ಬೇಡವೋ?
4) ತಮ್ಮ ರಾಸಲೀಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇರುವ ಸಿಡಿಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯಗಳಿಂದ ತಡೆಯಾಜ್ಞೆ ತಂದಿರುವ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ?
5) ಈ ಸರ್ಕಾರಕ್ಕೆ ಇನ್ನು ಒಂದು ಮುಕ್ಕಾಲು ವರ್ಷ ಮಾತ್ರ ಬಾಕಿ ಇರುವುದರಿಂದ ಒಂದೇ ಸಲಕ್ಕೆ 30 ಜನರನ್ನು ಸಚಿವ ಸಂಪುಟ ಸೇರಿಸಿಕೊಳ್ಳಬೇಕೋ ಅಥವಾ ಕೆಲವು ಸ್ಥಾನಗಳನ್ನು ಹಾಗೆ ಇಟ್ಟುಕೊಳ್ಳಬೇಕೋ?
6) ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿ ಮಾಡಬೇಕೋ ಬೇಡವೋ? ಮಾಡಿದರೆ ಎಷ್ಟು ಜನರನ್ನು ಮಾಡಬೇಕು ಮತ್ತು ಯಾವ ಮಾನದಂಡ ಅನುಸರಿಸಬೇಕು?
7) ಕೆಲವು ಹಿರಿಯರನ್ನು ಸಂಪುಟದಿಂದ ಕೈಬಿಡಬೇಕಾ ಬೇಡವಾ? ಈ ವಿಷಯದಲ್ಲಿ ಯಾವ ನಿಲುವು ತೆಗೆದುಕೊಳ್ಳಬೇಕು? ಯಾರನ್ನು ಕೈಬಿಡಬೇಕು?
 ಇನ್ನೊಂದೆಡೆ ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರು ಕೇಳಿಬಂದಿದ್ದ ಅರವಿಂದ ಬೆಲ್ಲದ್ ದೆಹಲಿಯಲ್ಲೇ ಠಿಕಾಣಿ ಹೂಡಿ ಒತ್ತಡ ಹೇರುತ್ತಿದ್ದಾರೆ. ಶಾಸಕರಾದ ಲಕ್ಷಣ ಸವದಿ, ಸಿ.ಸಿ ಪಾಟೀಲ್, ಸುನಿಲ್ ವಲ್ಯಾಪುರ, ರಾಜೂಗೌಡ ಮತ್ತು ಸತೀಶ್ ರೆಡ್ಡಿ ಕೂಡ ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments