Select Your Language

Notifications

webdunia
webdunia
webdunia
webdunia

ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆ; ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆ; ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ
ಬೆಂಗಳೂರು , ಶನಿವಾರ, 10 ಆಗಸ್ಟ್ 2019 (10:32 IST)
ಬೆಂಗಳೂರು : ರಾಜ್ಯದ ಹಲವು ಕಡೆ ಬಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲೂ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.




ಈ ನಡುವೆ ಇದೀಗ ಕಾವೇರಿ ಜಲಾನಯನ ಪ್ರದೇಶದ ನದಿಗಳಾದ ಕಾವೇರಿ, ಲಕ್ಷ್ಮಣ ತೀರ್ಥ ಹಾಗೂ ಹೇಮಾವತಿ ಪಾತ್ರದಲ್ಲೂ ಅಧಿಕ ಪ್ರಮಾಣದ ಮಳೆಯಾಗುತ್ತಿದ್ದು ಕೃಷ್ಣರಾಜ ಸಾಗರ ಜಲಾಶಯಕ್ಕೆ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್‌ ನೀರು ಹರಿದುಬರುತ್ತಿದೆ. ಅಲ್ಲದೇ ಜಲಾಶಯದ ಮಟ್ಟ 100 ಅಡಿಗಳನ್ನು ದಾಟಿದ್ದು, ಹೀಗಾಗಿ ಯಾವುದೇ ಕ್ಷಣದಲ್ಲಿ ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆಯಿದೆ ಎಮಬ ಮಾಹಿತಿ ಲಭ್ಯವಾಗಿದೆ.


ಈ ಹಿನ್ನಲೆಯಲ್ಲಿ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿ ವಾಸಿಸುವ ಸಾರ್ವಜನಿಕರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರ ವಹಿಸುವಂತೆ ಹಾಗೂ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಗೆ ಇಂದು ನೂತನ ಅಧ್ಯಕ್ಷರ ಆಯ್ಕೆ