Webdunia - Bharat's app for daily news and videos

Install App

ರಸ್ತೆ ಗುಂಡಿಯಿಂದ ಅಪಘಾತ ಸಾವು ಕಂಟ್ರ್ಯಾಕ್ಟರ್ ಮೇಲೆ ಕೇಸ್

Webdunia
ಬುಧವಾರ, 1 ಡಿಸೆಂಬರ್ 2021 (17:52 IST)
ರಸ್ತೆ ಗುಂಡಿಯಿಂದಾಗಿ ಸ್ಕೂಟರ್ ಸವಾರ ಕೆಳಕ್ಕೆ ಬಿದ್ದು ಮತ್ತೊಂದು ವಾಹನಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಸಂಚಾರ ಪೊಲೀಸರು ಬಿಬಿಎಂಪಿ ಅಸಿಸ್ಟೆಂಟ್​ ಎಕ್ಸಿಕ್ಯುಟೀವ್ ಇಂಜಿನಿಯರ್​(ಎಇಇ) ಮತ್ತು ಖಾಸಗಿ ಗುತ್ತಿಗೆದಾರನ ವಿರುದ್ಧ ಕ್ರಿಮಿನಲ್​ ಕೇಸ್​ ದಾಖಲಿಸಿದ್ದಾರೆ.ನ.27ರ ಮಧ್ಯಾಹ್ನ 1.30ರ ವೇಳೆಗೆ ಥಣಿಸಂದ್ರ ಮುಖ್ಯರಸ್ತೆಯಲ್ಲಿ ಅಜೀಂ ಅಹ್ಮದ್(21) ಸ್ಕೂಟರ್‌ನಲ್ಲಿ ಹೆಗಡೆನಗರದ ಕಡೆಗೆ ಹೋಗುತ್ತಿದ್ದರು. ರಸ್ತೆ ಗುಂಡಿ ಗಮನಿಸದೆ ಗುಂಡಿಗೆ ಸ್ಕೂಟರ್ ಬಿಟ್ಟಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು. ಅದೇ ಸಮಯಕ್ಕೆ ಹಿಂದಿನಿಂದ ಅತಿವೇಗವಾಗಿ ಬಂದ 407 ಗೂಡ್ಸ್ ವಾಹನ ಸವಾರನ ಬಲಗಾಲಿನ ತೊಡೆಯ ಮೇಲೆ ಚಲಿಸಿತ್ತು. ತೊಡೆ ಮತ್ತು ಬಲಗೈಗೆ ಗಾಯವಾಗಿ ರಕ್ತಸ್ರಾವ ಉಂಟಾದ ಅಜೀಂರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಂಜೆ ಅಸುನೀಗಿದ್ದರು. ಬಾಣಸವಾಡಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments