Webdunia - Bharat's app for daily news and videos

Install App

ಬಡತನ ಮುಕ್ತ ಕರ್ನಾಟಕ ಪರಿಕಲ್ಪನೆ : ಪಿಎಂ

Webdunia
ಮಂಗಳವಾರ, 21 ಜೂನ್ 2022 (14:19 IST)
ಮೈಸೂರು : ಬಡತನ ಮುಕ್ತ ಕರ್ನಾಟಕ ಹಾಗೂ ಬಡತನ ಮುಕ್ತ ಭಾರತ ನಮ್ಮ ಪರಿಕಲ್ಪನೆ ಆಗಿದ್ದು, ಅದಕ್ಕಾಗಿ ಹತ್ತು ಹಲವು ಯೋಜನೆಗಳನ್ನು ರೂಪಿಸಲಾಗಿದೆ.

ಇದರ ಪ್ರಮುಖ ಭಾಗವಾಗಿಯೇ ಒಂದು ದೇಶ- ರೇಷನ್ ಒಂದು ಪಡಿತರ ಚೀಟಿಯಂಥ ಯೋಜನೆ ಜಾರಿಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ಸೋಮವಾರ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ, ನಾಗನಹಳ್ಳಿ ಹೊಸ ಕೋಚಿಂಗ್ ಕಾಂಪ್ಲೆಕ್ಸ್, ಮೈಸೂರು ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ ಹಾಗೂ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಎಕ್ಸಲೆನ್ಸ್ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ಗರೀಭಿ ಕಲ್ಯಾಣ ಯೋಜನೆ ಈ ಹಿಂದೆ ಸೀಮಿತ ಪರಿಮಿತಿಯಲ್ಲಿತ್ತು. ಆದರೆ, ಅದನ್ನು ದೇಶವ್ಯಾಪಿ ವಿಸ್ತರಿಸಲಾಗಿದೆ. ಇಂದು ಈ ಯೋಜನೆ ರಾಜ್ಯದ ಗಡಿ ದಾಟಿ ಎಲ್ಲಡೆ ಹರಡಿದೆ ಎಂದರು.

ರಾಜ್ಯದಲ್ಲಿ ಹಾಗೂ ದೇಶದಲ್ಲಿ ಅನೇಕ ಸರ್ಕಾರಗಳು ಆಡಳಿತ ನಡೆಸಿ ಹೋಗಿವೆ. ಆದರೆ, ಬಿಜೆಪಿ ನೇತೃತ್ವದ ಸರ್ಕಾರ ಹಳ್ಳಿ, ಮಹಿಳೆ, ರೈತ, ಬಡವ ಸೇರಿ ದೀನ ದಲಿತರ ಪರ ಸದಾ ಯೋಜನೆ ರೂಪಿಸುತ್ತಾ ಬಂದಿದೆ.

ಕಳೆದ ಎಂಟು ವರ್ಷಗಳಲ್ಲಿ ಜನರ ಭಾವನೆ ಅರ್ಥಮಾಡಿಕೊಂಡು ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ದೇಶದ ಪ್ರತಿಯೊಬ್ಬರ ಹಿತ ಕಾಯುವುದೇ ನಮ್ಮ ಉದ್ದೇಶ. ರೈತರಿಗಾಗಿ ಪಿಎಂ ಕಿಸಾನ್ ಯೋಜನೆ ಜಾರಿಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments