Webdunia - Bharat's app for daily news and videos

Install App

ಬೆಂಗಳೂರಿನ ಹಲವಡೆ ಇಂದು ಪವರ್ ಕಟ್

Webdunia
ಸೋಮವಾರ, 19 ಜುಲೈ 2021 (10:37 IST)
ಬೆಂಗಳೂರು(ಜು.19): ಇಂದು ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಎಂದು ಬೆಸ್ಕಾಂ ಮನವಿ ಮಾಡಿಕೊಂಡಿದೆ. ನಗರದ ವಿವಿಧ ಏರಿಯಾಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6.30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಅಧಿಕೃತವಾಗಿ ಮಾಹಿತಿ ನೀಡಿದೆ.

ಬೆಸ್ಕಾಂ ಹೇಳಿರುವ ಪ್ರಕಾರ, ಬೆಂಗಳೂರಿನ ಜಯನಗರ ಸೇರಿದಂತೆ ಹಲವೆಡೆ ಇಂದು ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ತಿಳಿದು ಬಂದಿದೆ.
ಎಸ್2- ಸಬ್-ಡಿವಿಶನ್, ಬಿಎಂಟಿಸಿ, ಸುಧಾಮನಗರ, ಸಿದ್ದಯ್ಯ ರಸ್ತೆ.(ಬೆಳಗ್ಗೆ 10 ರಿಂದ 6.30 ರವರೆಗೆ) ಎಸ್6-ಎಲಿಟಾ, ಅಷ್ಟಲಕ್ಷ್ಮಿ ಲೇಔಟ್, ಪುಟ್ಟೇನಹಳ್ಳಿ, ಕೆ.ಆರ್ಲೇಔಟ್. (ಬೆಳಗ್ಗೆ 10 ರಿಂದ 6.30 ರವರೆಗೆ) ಎಸ್9- ಪದ್ಮನಾಭನಗರ, ಎಸ್9 ಕಚೇರಿ, ರಿಂಗ್ ರೋಡ್, 27ನೇ ಮುಖ್ಯರಸ್ತೆ, ಯಾರಬ್ನಗರ ಮುಖ್ಯ ರಸ್ತೆ, ಮಸ್ಜೀದ್ ರಸ್ತೆ, ಬಿಎಸ್ಎನ್ಎಲ್ ಕಚೇರಿ, ಸರ್ಕಾರಿ ಆಸ್ಪತ್ರೆ, ಎನ್ಪಿಟಿಐ ಸರ್ಕಲ್, ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್. (ಬೆಳಗ್ಗೆ 10ರಿಂದ ಸಂಜೆ 6.30 ರವರೆಗೆ)
ಎಸ್15- ಬನಶಂಕರಿ, ಕತ್ರಿಗುಪ್ಪೆ ಮುಖ್ಯ ರಸ್ತೆ ಮತ್ತು ಕತ್ರಿಗುಪ್ಪೆ ಗ್ರಾಮ, 100 ಅಡಿ ರಿಂಗ್ ರೋಡ್, (ಬೆಳಗ್ಗೆ 10 ರಿಂದ ಸಂಜೆ 6.30ರವರೆಗೆ)ಎಸ್18- ಅರೇಹಳ್ಳಿ MUSS, ಬೃಂದಾವನ ಲೇಔಟ್, (ಬೆಳಗ್ಗೆ 9.10ರಿಂದ ಮಧ್ಯಾಹ್ನ 3 ಗಂಟೆವರೆಗೆ) ಎಸ್18- ಸುಬ್ರಹ್ಮಣ್ಯಪುರ MUSS, ತುರಹಳ್ಳಿ (ಬೆಳಗ್ಗೆ 9.30ರಿಂದ ಮಧ್ಯಾಹ್ನ 3.30ರವರೆಗೆ) ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಆಗಲಿದೆ.ಈ ಭಾಗದ ಜನ ವಿದ್ಯುತ್ ಸಂಬಂಧಿತ ನಿತ್ಯದ ಚಟುವಟಿಗಳನ್ನು ಬೆಳಗ್ಗೆ 10 ಗಂಟೆ ಒಳಗೆ ಹಾಗೂ ಸಂಜೆ 6.30 ರ ಬಳಿಕ ಮಾಡಿಕೊಳ್ಳುವುದು ಒಳಿತು. ಇಂದು ಪವರ್ ಕಟ್ ಸಮಸ್ಯೆಗೆ ತಕ್ಕಂತೆ ಕೆಲಸಗಳನ್ನು ಮಾಡಿಕೊಳ್ಳುವುದು ಉತ್ತಮ. ಬೆಸ್ಕಾಂ ಮನವಿಗೆ ಸಹಕರಿಸಬೇಕು ಎಂದು ನಿಗಮ ಕೇಳಿಕೊಂಡಿದೆ.
ನಿರ್ವಹಣಾ ಕಾರ್ಯದಿಂದಾಗಿ ಇಂದು ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸಾಧ್ಯವಾಗುತ್ತಿಲ್ಲ. ಕಳೆದ ವಾರ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments