Publish Date: Mon, 18 Apr 2022 (18:44 IST)
Updated Date: Mon, 18 Apr 2022 (18:47 IST)
ವಿಜಯನಗರದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆ ಕುರಿತು ಕಾರ್ಯಕಾರಿಣಿ ಸಭೆ ಎರಡು ದಿನಗಳ ಕಾಲ ತುಂಬಾ ಚೆನ್ನಾಗಿ ನಡೆಯಿತು. ರಾಜ್ಯದಲ್ಲಿ ಬಿಜೆಪಿಗೆ ಒಳ್ಳೆಯ ಶಕ್ತಿ ಬಂದಿದೆ ಎಂದು ಶಿವಮೊಗ್ಗದಲ್ಲಿ ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಹೇಳಿದರು. ಕಾರ್ಯಕಾರಿಣಿ ಸಭೆಯ ಬಳಿಕ ಒಳ್ಳೆಯ ವಾತಾವರಣ ನಿರ್ಮಾಣವಾಗಿದೆ. ನಿನ್ನೆಯಿಂದ ಎಲ್ಲಾ ಹಿರಿಯ ಮುಖಂಡರು ಭಾಗವಹಿಸಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಬಿಜೆಪಿಗೆ ಸೇರ್ಪಡೆಯಾದ 17 ಮಂದಿ ಶಾಸಕರು ಭಾಗವಹಿಸಿದ್ದೆವು. ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಪಡೆಯುವ ಗುರಿ ಹೊಂದಲಾಗಿದೆ ಎಂದರು.