Webdunia - Bharat's app for daily news and videos

Install App

ಪವರ್ ಗ್ರಿಡ್: ಮುಂದುವರೆದ ಪ್ರತಿಭಟನೆ- ಬಂಧನ

Webdunia
ಬುಧವಾರ, 25 ಜುಲೈ 2018 (19:28 IST)
ಬನ್ನೇರುಘಟ್ಟ ಬಳಿಮತ್ತೆ ಮುಂದುವರೆದ ಪವರ್ ಗ್ರಿಡ್ ಪ್ರತಿಭಟನೆಯಿಂದ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಹೋರಾಟ ನಡೆಯಿತು. ಆಗ ಕೆಲಸ ನಿಲ್ಲಿಸಲು ಹೋದ ರೈತ ಹೋರಾಟಗಾರರ ಬಂಧನವಾಗಿದೆ. 


ರೈತರಿಗೆ ಪರಿಹಾರ ನೀಡುವವರೆಗೂ ತಾತ್ಕಾಲಿಕವಾಗಿ ಕೆಲಸ ನಿಲ್ಲಿಸುವಂತೆ ಸಿಎಂ ಸೂಚನೆಯಿದೆ. ಆದರೆ ಸಿಎಂ ಮಾತಿಗೂ ಕಿಮ್ಮತ್ತು ನೀಡದ ಪವರ್ ಗ್ರಿಡ್ ಅಧಿಕಾರಿಗಳು ತಮ್ಮ ಕೆಲಸ ಮುಂದುವರಿಸಿದ್ದರು. ಇದನ್ನು ಖಂಡಿಸಿ ಕೆಲಸ ನಿಲ್ಲಿಸಲು ಹೋದ ರೈತ ಹೋರಾಟಗಾರರ ಬಂಧನ ಮಾಡಲಾಗಿದೆ.

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಪವರ್ ಗ್ರಿಡ್ ಸಿಬ್ಬಂದಿ ಕೆಲಸ ನಡೆಸುತ್ತಿದ್ದಾರೆ. ರೈತರ ಜಮೀನಿಗೆ ಪರಿಹಾರ ನೀಡದೇ ಕೆಲಸ ಮುಂದುವರೆಸುತ್ತಿರುವ ಅಧಿಕಾರಿಗಳ ವಿರುದ್ಧ ರೈತರು ಗರಂ ಆಗಿದ್ದಾರೆ. ಕೆಲವು ರೈತರು ಕಂಬ ಏರಿ ಕುಳಿತು ಪ್ರತಿಭಟನೆ ಮುಂದುವರೆಸಿದ್ದಾರೆ. ರೈತರಿಗೆ ಸೂಕ್ತ ಪರಿಹಾರ ನೀಡುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments