Webdunia - Bharat's app for daily news and videos

Install App

ಪ್ರಭುದ್ಧ ರಾಜಕಾರಣಿ ಅಲ್ಲ: ಸಿದ್ದರಾಮಯ್ಯ

Webdunia
ಮಂಗಳವಾರ, 7 ಜೂನ್ 2022 (14:04 IST)
ಬೆಳಗಾವಿ : ನಳಿನ್ ಕುಮಾರ್ ಕಟೀಲ್ ಬಿಜೆಪಿ ಅಧ್ಯಕ್ಷರಾಗುವುದಕ್ಕೆ ಲಾಯಕ್ ಅಲ್ಲ. ಕಟೀಲ್ ಪ್ರಭುದ್ಧ ರಾಜಕಾರಣಿ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಟೀಲ್ ರಾಜಕೀಯವಾಗಿ ನಮ್ಮ ವಿರೋಧಿಗಳು. ಅವರು ಹೇಳಿದ್ದು ಸತ್ಯ ಅಂತಾ ನಾವು ನಂಬಬೇಕಾ? ಕಟೀಲ್ ಆಧಾರ ರಹಿತ ಆರೋಪವನ್ನು ಮಾಡುತ್ತಿದ್ದಾರೆ.

ಕಟೀಲ್ ಸುಳ್ಳು ಹೇಳುತ್ತಿದ್ದಾರೆ. ಅವರು ಬಿಜೆಪಿ ಅಧ್ಯಕ್ಷರಾಗುವುದಕ್ಕೆ ಲಾಯಕ್ ಅಲ್ಲ. ಬಾಯಿಗೆ ಏನ್ ಏನು ಬರುತ್ತದೋ ಅದನ್ನು ಬಂದ ಹಾಗೇ ಮಾತನಾಡುತ್ತಾರೆ. ಅವರ ಮಾತನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ಏಕೆಂದರೆ ಕಟೀಲ್ ಪ್ರಭುದ್ಧ ರಾಜಕಾರಣಿ ಅಲ್ಲ ಎಂದು ಟಾಂಗ್ ನೀಡಿದರು.

ಮೋದಿ ಸಾಧನೆ ನೋಡಿ ಬಿಜೆಪಿಗೆ ಮತ ಹಾಕುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪೆಟ್ರೋಲಿಯಂ ಬೆಲೆ ಹೆಚ್ಚಾಗಿರುವುದು ಒಳ್ಳೆಯದಾ? ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಅದು ಒಳ್ಳೆಯದಾ? ಜನರನ್ನು ಸಾಲದ ಸುಳಿಗೆ ಸಿಲುಕಿದ್ದು ಒಳ್ಳೆಯದಾ ಎಂದು ಪ್ರಶ್ನಿಸಿದರು. 

ದೇಶದಲ್ಲಿ ಸಾಲದ ಪ್ರಮಾಣ ತೀವ್ರ ಹೆಚ್ಚಳವಾಗಿದೆ. ಪಠ್ಯ ಪುಸ್ತಕದಲ್ಲಿ ಉದ್ದೇಶ ಪೂರ್ವಕವಾಗಿ ಅನೇಕ ತಪ್ಪು ಮಾಡಿದ್ದಾರೆ. ಅಂಬೇಡ್ಕರ್ ಬಗ್ಗೆ ಚರಿತ್ರೆಯ ಅಗತ್ಯತೆ ಇದೆ. ಸಂವಿಧಾನ ಶಿಲ್ಪಿ ಎನ್ನುವುದನ್ನು ತೆಗೆದು ಹಾಕಿದರೆ ಹೇಗೆ? ಕುವೆಂಪು ಫೋಟೋ ತೆಗೆದು ಹಾಕಿದರೆ ಅವಮಾನ ಅಲ್ಲವೇ? ನಾರಾಯಣಗುರು, ಬಸವಣ್ಣ, ಸುರಪುರ ನಾಯಕರನ್ನು ಅವಮಾನ ಮಾಡಿ ಪಠ್ಯವನ್ನು ಕೇಸರಿಕರಣ ಮಾಡಲು ಹೋರಟಿದ್ದಾರೆ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments