Webdunia - Bharat's app for daily news and videos

Install App

ತಿಂಗಳಿಗೆ 12 ರಿಂದ 15 ಲಕ್ಷ ಸಂಬಳ ಆಂಬ್ಯುಲೆನ್ಸ್ ಗೆ ದಾನ ಮಾಡ್ತಿದ್ದೀನಿ: ಪ್ರದೀಪ್ ಈಶ್ವರ್

Krishnaveni K
ಸೋಮವಾರ, 24 ಮಾರ್ಚ್ 2025 (14:39 IST)
ಬೆಂಗಳೂರು: ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರತೀ ತಿಂಗಳು 12 ರಿಂದ 15 ಲಕ್ಷ ರೂ. ಆಂಬ್ಯುಲೆನ್ಸ್ ಗೆ ದಾನ ಮಾಡ್ತಿದ್ದೇನೆ ಎಂದಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಪ್ರದೀಪ್ ಈಶ್ವರ್ ಏನು ಮಾಡ್ತಿದ್ದಾರೆ ಎಂಬ ವಿಪಕ್ಷಗಳ ಟೀಕೆಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಉತ್ತರ ಕೊಟ್ಟಿದ್ದಾರೆ. ಎಲ್ಲಾ ಇದ್ದು ದಾನ ಮಾಡೋದು ದಾನ ಅಲ್ಲ, ಏನೂ ಇಲ್ಲದೇ ಇದ್ದರೂ ಅಗತ್ಯವಿದ್ದವರಿಗೆ ದಾನ ಮಾಡುವುದು ದಾನ ಎಂದಿದ್ದಾರೆ.

ನನ್ನ ಶಾಸಕರ ವೇತನ, ಪರಿಶ್ರಮ್ ಅಕಾಡಮಿಯ ಗಳಿಕೆ ಎಲ್ಲಾ ಸೇರಿ ತಿಂಗಳಿಗೆ 12-15 ಲಕ್ಷ ರೂ. ಅಮ್ಮ ಆಂಬ್ಯುಲೆನ್ಸ್ ಗೆ ನೀಡುತ್ತಿದ್ದೇನೆ. ಯಾರಾದ್ರೂ ಕರೆ ಮಾಡಿದ್ರೆ 10 ನಿಮಿಷದಲ್ಲಿ ಆಂಬ್ಯುಲೆನ್ಸ್ ಅವರ ಮನೆ ಮುಂದೆ ಬಂದು ನಿಲ್ಲುತ್ತದೆ.

ನನ್ನ ಕ್ಷೇತ್ರವನ್ನು ನೋಡಿಕೊಳ್ಳುವುದಕ್ಕೆಂದೇ 40 ಜನರ ತಂಡ ಕಟ್ಟಿದ್ದೇನೆ. ತಲಾ ಇಬ್ಬರು ಹಗಲು ಮತ್ತು ರಾತ್ರಿ ಶಿಫ್ಟ್ ಗಳಲ್ಲಿ ಅಮ್ಮ ಆಂಬ್ಯುಲೆನ್ಸ್ ನೋಡಿಕೊಳ್ಳಲೆಂದೇ ನೇಮಿಸಿದ್ದೇನೆ. ಎಸ್ಎಸ್ಎಲ್ ಸಿ ಓದುವ ವಿದ್ಯಾರ್ಥಿಗಳಿಗೆ 1,000 ರೂ. ಸ್ಕಾಲರ್ ಶಿಪ್ ನೀಡುತ್ತಿದ್ದೇನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಸಾವಿರಾರು ಜನರು ಇದಕ್ಕೆ ಸಾಕ್ಷಿ. ಚಿಕ್ಕಬಳ್ಳಾಪುರಕ್ಕೆ ನಾನು ಏನು ಮಾಡಿದ್ದೇನೆ ಎನ್ನುವವರಿಗೆ ಇದೇ ನನ್ನ ರಿಪೋರ್ಟ್ ಕಾರ್ಡ್ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments