Webdunia - Bharat's app for daily news and videos

Install App

ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ರೆ ಎಂದು ಗಂಟಲು ಹರಿದುಕೊಂಡು ಕೂಗಿದ ಶಾಸಕ ಪ್ರದೀಪ್ ಈಶ್ವರ್

Krishnaveni K
ಶುಕ್ರವಾರ, 19 ಜುಲೈ 2024 (14:42 IST)
ಬೆಂಗಳೂರು: ಇಂದೂ ಸದನದಲ್ಲಿ ವಾಲ್ಮೀಕಿ ಹಗರಣದ ಬಗ್ಗೆ ಆಡಳಿತ ಮತ್ತು ವಿಪಕ್ಷಗಳ ನಡುವೆ ಮಾತಿನ ಚಕಮಕಿ ಮುಂದುವರಿದಿದೆ. ಶಾಸಕ ಪ್ರದೀಪ್ ಈಶ್ವರ್ ಇಂದು ಸದನದಲ್ಲಿ ಮಾತನಾಡಿದ್ದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸದನದಲ್ಲಿ ಪ್ರದೀಪ್ ಈಶ್ವರ್ ಗದ್ದಲದ ನಡುವೆಯೂ ಮಾತಿಗೆ ಎದ್ದು ನಿಂತರು. ಈ ವೇಳೆ ಬಿಜೆಪಿಯವರ ಘೋಷಣೆಯ ನಡುವೆ ಅವರ ಧ್ವನಿ ಕೇಳುತ್ತಿರಲಿಲ್ಲ. ಹೀಗಾಗಿ ಏರು ಧ್ವನಿಯಲ್ಲಿ ಬಿಜೆಪಿಯವರಿಗೆ ಏನಾದ್ರೂ ಮಾನ ಮರ್ಯಾದೆ ಇದ್ರೆ ರಾಜ್ಯದಲ್ಲಿ ಮಳೆಯಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆಎ ಮಾಡಲು ಅವಕಾಶ ಕೊಡಬೇಕು ಎಂದು ಕೂಗಾಡಿದರು.

ಒಂದೆಡೆ ತಾಳ್ಮೆ ಕಳೆದುಕೊಂಡು ಕೂಗಾಡಿದ ಅವರನ್ನು ಕೈ ಶಾಸಕರು ಸಮಾಧಾನಿಸಬೇಕಾಯಿತು. ರಾಜ್ಯದಲ್ಲಿ ಮಳೆಯಿಂದಾಗಿ ಸಾಕಷ್ಟು ಜನ ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ. ಜೀವ ಕಳೆದುಕೊಂಡಿದ್ದಾರೆ. ಇದರ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರು ಅವಕಾಶ ಕೊಡಲಿ. ಇಲ್ಲಿರುವ ಎಲ್ಲಾ ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಸಾಹೇಬ್ರು 25 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಇಲ್ಲಾಂದ್ರೆ ಹೇಳಲಿ ನೋಡೋಣ ಎಂದು ಹೇಳಿದಾಗ ವಿಪಕ್ಷ ನಾಯಕ ಆರ್ ಅಶೋಕ್ ಆಕ್ಷೇಪಿಸಿದರು.

ನಿಯಮಗಳಿಗೆ ವಿರುದ್ಧವಾಗಿ ಸದನ ನಡೆಸಲಾಗುತ್ತಿದೆ. ಇಲ್ಲಿ ಬೇಡದ ವಿಚಾರಗಳನ್ನು ಎಳೆದು ತರಲಾಗುತ್ತಿದೆ ಎಂದು ಆಕ್ಷೇಪಿಸಿದರು. ಆಗ ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್, ಈಶ್ವರ್ ಅವರೇ ಪಕ್ಷದ ವಿಚಾರ ಇಲ್ಲಿ ಬೇಡ, ಸಮಸ್ಯೆ ಬಗ್ಗೆ ಮಾತನಾಡಿ ಎಂದರು. ಆದರೂ ಪ್ರದೀಪ್ ಈಶ್ವರ್ ಸಮಯ ಮೀರಿ ಮಾತನಾಡಿದಾಗ ಸ್ಪೀಕರ್ ಬೇರೆಯವರಿಗೆ ಅವಕಾಶ ಕೊಡಲು ಮುಂದಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments