Webdunia - Bharat's app for daily news and videos

Install App

ಬಿಜೆಪಿಯವರು ತಾವೇ ರಸ್ತೆ ಗುಂಡಿ ಮಾಡಿ ಮುಚ್ಚುತ್ತಿದ್ದಾರೆ: ಪ್ರದೀಪ್ ಈಶ್ವರ್

Krishnaveni K
ಬುಧವಾರ, 24 ಸೆಪ್ಟಂಬರ್ 2025 (14:13 IST)
ಬೆಂಗಳೂರು: ರಾಜ್ಯಾದ್ಯಂತ ರಸ್ತೆ ಗುಂಡಿ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ಟಾಂಗ್ ಕೊಟ್ಟಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಾವೇ ಗುಂಡಿ ತೋಡಿ ತಾವೇ ಮುಚ್ಚುತ್ತಿದ್ದಾರೆ ಎಂದಿದ್ದಾರೆ.
 

ಇಂದು ಬೆಂಗಳೂರಿನಲ್ಲಿ ಅನೇಕ ಕಡೆ ಬಿಜೆಪಿ ನಾಯಕರು ರಸ್ತೆ ಗುಂಡಿ ಮುಚ್ಚುವ ಮೂಲಕ ಮತ್ತು ರಸ್ತೆ ತಡೆ ನಡೆಸುವ ಮೂಲಕ ರಸ್ತೆ ಗುಂಡಿ ವಿರುದ್ಧ ಸಾಂಕೇತಿಕವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಇದರ ಬಗ್ಗೆ ಶಾಸಕ ಪ್ರದೀಪ್ ಈಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಈ ರಸ್ತೆ ಗುಂಡಿಗಳೆಲ್ಲಾ ಯಾರ ಕಾಲದಲ್ಲಿ ಆಗಿತ್ತು ಹೇಳಿ? ಕಳಪೆ ಕಾಮಗಾರಿ ಮಾಡಿದರೆ ಬೇಗ ಗುಂಡಿ ಬೀಳುತ್ತದೆ. ನಮ್ಮ ಸರ್ಕಾರ ಪ್ರತಿನಿತ್ಯ 1000 ಗುಂಡಿ ಮುಚ್ಚುವ ಕೆಲಸ ಮಾಡುತ್ತಿದೆ. ಬಿಜೆಪಿಯವರು ಈಗ ತಾವೇ ಗುಂಡಿ ತೋಡಿ ಮುಚ್ಚುವ ನಾಟಕವಾಡುತ್ತಿದ್ದಾರೆ ಎಂದಿದ್ದಾರೆ.

ಬಿಜೆಪಿಯವರು ದೆಹಲಿಯಲ್ಲಿ ಎಷ್ಟು ರಸ್ತೆ ಗುಂಡಿ ಇದೆ ನೋಡಲಿ. ಅಂಕಿ ಅಂಶಗಳ ಪ್ರಕಾರ ದೆಹಲಿಯಲ್ಲಿ ಇದಕ್ಕಿಂತ ಹೆಚ್ಚು ರಸ್ತೆ ಗುಂಡಿಗಳಿವೆ. ಅದರ ಬಗ್ಗೆ ಬಿಜೆಪಿಯವರು ಮಾತನಾಡಲಿ ನೋಡೋಣ ಎಂದು ಪ್ರದೀಪ್ ಈಶ್ವರ್ ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments