Select Your Language

Notifications

webdunia
webdunia
webdunia
webdunia

ಪ್ರದೀಪ್​ನನ್ನು BJP ಸರ್ಕಾರ ಕೊಲೆ ಮಾಡಿದೆ-ರಣದೀಪ್​​ ಸಿಂಗ್​​ ಸುರ್ಜೇವಾಲ

ಪ್ರದೀಪ್​ನನ್ನು BJP ಸರ್ಕಾರ ಕೊಲೆ ಮಾಡಿದೆ-ರಣದೀಪ್​​ ಸಿಂಗ್​​ ಸುರ್ಜೇವಾಲ
bangalore , ಮಂಗಳವಾರ, 3 ಜನವರಿ 2023 (18:16 IST)
ಬೆಂಗಳೂರಿನಲ್ಲಿ ಪ್ರದೀಪ್ ಎಂಬ ವ್ಯಕ್ತಿ ಶಾಸಕ ಅರವಿಂದ​​ ಲಿಂಬಾವಳಿ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಸಂಬಂಧ ಅವರ ಪ್ರದೀಪ್​​​​ ಪತ್ನಿ ದೂರು ದಾಖಲಿಸಿದ್ದು, ಅರವಿಂದ ಲಿಂಬಾವಳಿ ವಿರುದ್ಧ FIR ದಾಖಲಾಗಿತ್ತು. ಈ ಆತ್ಮಹತ್ಯೆ ಕುರಿತು ರಾಜ್ಯ ಕಾಂಗ್ರೆಸ್​​ ಉಸ್ತುವಾರಿ ರಣದೀಪ್​​ ಸಿಂಗ್​​ ಸುರ್ಜೇವಾಲ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರದೀಪ್ ಕುಟುಂಬಕ್ಕೆ ರಿಪೇರಿ ಮಾಡಲಾಗದಷ್ಟು ನೋವಾಗಿದೆ. ಇವೆಲ್ಲ ಭ್ರಷ್ಟ BJP ಸರ್ಕಾರದಿಂದ ಆಗುತ್ತಿರುವ ಸಾವುಗಳು. ರಾಜ್ಯ BJP ಸರ್ಕಾರದ 40 ಪರ್ಸೆಂಟ್​​ ಕಮಿಷನ್​​ನಿಂದ ಜೀವದ ಮೇಲೆ ಜೀವ ಬಲಿಯಾಗುತ್ತಿದೆ. ಸಂತೋಷ್ ಪಾಟೀಲ್ ಕೂಡ BJP ಲೀಡರ್ ಆಗಿದ್ದ. ಅವನಿಗೂ ಹಣಕಾಸಿನ ಸಮಸ್ಯೆ ಆಗಿತ್ತು. BJP ನಾಯಕರು ಯಾಕೆ ಹಣಕಾಸಿನ ವ್ಯವಹಾರಗಳಲ್ಲಿ ತಲೆ ಹಾಕ್ತಿದ್ದಾರೆ?. ಪ್ರದೀಪ್ ಸಾವು ಆತ್ಮ ಹತ್ಯೆ ಅಲ್ಲ, ಅದೊಂದು ಕೊಲೆ. ಪ್ರದೀಪ್ ಕೊಲೆಗೆ ಕಾರಣ ಆದವರಿಗೆ ಸರ್ಕಾರ ಶಿಕ್ಷೆ ಕೊಡಬೇಕು. ಅದು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಅವರಿಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಿ