Webdunia - Bharat's app for daily news and videos

Install App

ಮೋದಿಯವರನ್ನು ಸಾವಿನ ಕೂಪಕ್ಕೆ ತಳ್ಳೋ ಆಹ್ವಾನ ನೀಡಿತ್ತು : ಸ್ಮೃತಿ ಇರಾನಿ

Webdunia
ಶುಕ್ರವಾರ, 28 ಏಪ್ರಿಲ್ 2023 (11:14 IST)
ಬೆಳಗಾವಿ : ಕಾಂಗ್ರೆಸ್ ಪಕ್ಷ ಎಂತಹ ನಿರ್ಲಜ್ಜ ಪಕ್ಷವೆಂದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಸಾವಿನ ಕೂಪಕ್ಕೆ ತಳ್ಳೋ ಆಹ್ವಾನ ನೀಡಿತ್ತು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದರು.

ಬೆಳಗಾವಿಯ ಹಿಂಡಲಗಾದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,

ಈ ಕಾಂಗ್ರೆಸ್ ಪಕ್ಷ ನರೇಂದ್ರ ಮೋದಿಯವರ ಶತಾಯುಷಿ ತಾಯಿ ಬಗ್ಗೆ ಅವಹೇಳನ ಮಾಡಿದ್ದ ಪಕ್ಷ. ನರೇಂದ್ರ ಮೋದಿಯವರ ಸ್ವರ್ಗೀಯ ತಂದೆಯವರ ಅಪಮಾನ ಮಾಡಿದ ನಿರ್ಲಜ್ಜ ಪಕ್ಷ ಕಾಂಗ್ರೆಸ್ ಎಂದರು.

ನಾನು ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೆ ಹೇಳಬಯಸುತ್ತೇನೆ. ನೀವು ಇಂದು ರಾಜಕೀಯ ಪಕ್ಷವೊಂದರ ಅಧ್ಯಕ್ಷರಾಗಿದ್ದೀರಿ. ಆ ರಾಜಕೀಯ ಪಕ್ಷದ ಇತಿಹಾಸ ಹೇಗಿದೆ ಎಂದರೆ ದಲಿತ ನಾಯಕನಾದರೆ ರಾಹುಲ್ ಗಾಂಧಿ ತಮ್ಮ ಚಪ್ಪಲಿ ಅವರಿಂದ ತೆಗೆಸುತ್ತಾರೆ. ದೇಶದಲ್ಲಿ ಮೊದಲ ಬಾರಿ ಆದಿವಾಸಿ ಮಹಿಳೆಗೆ ರಾಷ್ಟ್ರಪತಿ ಅಭ್ಯರ್ಥಿ ಮಾಡಿದರೆ ಅವರ ಬಗ್ಗೆ ಅವಹೇಳನ ಹೇಳಿಕೆ ನೀಡುವಂತ ಪಕ್ಷ ಕಾಂಗ್ರೆಸ್ ಎಂದು ಕಟುವಾಗಿ ಟೀಕಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments