Select Your Language

Notifications

webdunia
webdunia
webdunia
webdunia

ಪತಿ ಕಿರುಕುಳದಿಂದ ನೊಂದ ಗರ್ಭಿಣಿ ಆತ್ಮಹತ್ಯೆಗೆ ಶರಣು

ಪತಿ ಕಿರುಕುಳದಿಂದ ನೊಂದ ಗರ್ಭಿಣಿ ಆತ್ಮಹತ್ಯೆಗೆ ಶರಣು
ಬೆಂಗಳೂರು , ಬುಧವಾರ, 4 ಮಾರ್ಚ್ 2015 (10:35 IST)
ಪತಿಯ ಕಿರುಕುಳಕ್ಕೆ ಬೇಸತ್ತ ಗರ್ಭಿಣಿ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ಯಾಟರಾಯನಪುರದ ನಿವಾಸವೊಂದರಲ್ಲಿ ನಡೆದಿದೆ. 
 
ಮೃತ ಮಹಿಳೆಯನ್ನು ಲಕ್ಷ್ಮಿ(26) ಎನ್ನಲಾಗಿದ್ದು, ಆಕೆಯ ಪತಿ ಪವನ್ ಪ್ರತಿನಿತ್ಯ ದೈಹಿಕ ಹಾಗೂ ಮಾನಸಿಕವಾಗಿ ತುಂಬಾ ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದು, ಇದೇ ಕಾರಣಕ್ಕೆ ಬೇಸತ್ತು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಿದ್ದಾರೆ. 
 
ಮೃತ ಮಹಿಳೆಯ ಪೋಷಕರು ಇಲ್ಲಿನ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

Share this Story:

Follow Webdunia kannada