Webdunia - Bharat's app for daily news and videos

Install App

ಕಾರು ಅಪಘಾತ ಪ್ರಕರಣ ಬಗ್ಗೆ ಸ್ಪಷ್ಟನೆ ನೀಡಿದ ನಟ ಪ್ರಜ್ವಲ್, ದಿಗಂತ್

Webdunia
ಗುರುವಾರ, 28 ಸೆಪ್ಟಂಬರ್ 2017 (19:48 IST)
ಬೆಂಗಳೂರು: ಜಯನಗರದ ಸೌತ್ ಎಂಡ್ ಸರ್ಕಲ್ ನಲ್ಲಿ ನಡೆದಿರುವ ಕಾರು ಅಪಘಾತಕ್ಕೂ ತಮಗು ಯಾವುದೇ ಸಂಬಂಧವಿಲ್ಲ ಎಂದು ನಟ ಪ್ರಜ್ವಲ್ ದೇವರಾಜ್ ಸ್ಪಷ್ಟಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದ ತಮ್ಮ ಫೇಸ್ ಬುಕ್ ಖಾತೆಯಿಂದ ಲೈವ್ ನೀಡಿರುವ ಪ್ರಜ್ವಲ್, ಪ್ರಕರಣದಲ್ಲಿ ಮಾಧ್ಯಮಗಳು ನನ್ನ ಹೆಸರು ಸೇರಿಸಿದ್ದು ತಿಳಿದು ಬೇಸರವಾಯಿತು. ಸದ್ಯ ಗೋವಾದಲ್ಲಿ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದೇನೆ. ಆದರೆ ಸಾಮಾಜಿಕ ಕಾಳಜಿ ಇರಬೇಕಾದ ಕೆಲ ವಾಹಿನಿಗಳು ನಮ್ಮ ಕುಟುಂಬದ ಹೆಸರಿಗೆ ಧಕ್ಕೆ ತಂದಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಸುದ್ದಿ ವಾಹಿನಿಗಳೊಂದಿಗೆ ಮಾತನಾಡಿರುವ ನಟ ದಿಗಂತ್, ತಮ್ಮ ವಿರುದ್ಧ ಮಾಡಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ವಿಷ್ಣು ಪರಿಚಯವಿರುವುದು ನಿಜ. ಆದರೆ ಘಟನೆ ನಡೆದ ವೇಳೆ ನಾನು ಇರಲಿಲ್ಲ. ಪರಿಚಯವಿರುವ ಮಾತ್ರಕ್ಕೆ ನನ್ನ, ಪ್ರಜ್ವಲ್ ಹೆಸರು ಸೇರಿಸುವುದು ಸರಿಯಲ್ಲ. ಸದ್ಯ ಕನಕಪುರದ ಸಮೀಪದಲ್ಲಿ ತಮ್ಮ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಅದರಲ್ಲಿ ತಾವು ನಿರತರಾಗಿರುವುದಾಗಿ ಹೇಳಿದ್ದಾರೆ.

ನಿನ್ನೆ ಖ್ಯಾತ ಉದ್ಯಮಿ ದಿ. ಆದಿಕೇಶವುಲು ಮೊಮ್ಮಗ ವಿಷ್ಣುವಿನ ಕಾರು ಅಪಘಾತವಾಗಿತ್ತು. ವಿಷ್ಣುಸೇರಿದಂತೆ ಘಟನೆಯಲ್ಲಿ ಮೂವರಿಗೆ ಗಾಯವಾಗಿದೆ. ಕಾರಿನಲ್ಲಿ ಗಾಂಜಾ ಸಿಕ್ಕಿದ್ದು, ಘಟನಾ ಸಂದರ್ಭದಲ್ಲಿ ನಟರಾದ ಪ್ರಜ್ವಲ್ ದೇವರಾಜ್ ಮತ್ತು ದಿಗಂತ್ ಜತೆಯಲ್ಲಿದ್ದರು ಎನ್ನಲಾಗಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments