ಕಾರು ಅಪಘಾತ ಪ್ರಕರಣ ಬಗ್ಗೆ ಸ್ಪಷ್ಟನೆ ನೀಡಿದ ನಟ ಪ್ರಜ್ವಲ್, ದಿಗಂತ್

Webdunia
ಗುರುವಾರ, 28 ಸೆಪ್ಟಂಬರ್ 2017 (19:48 IST)
ಬೆಂಗಳೂರು: ಜಯನಗರದ ಸೌತ್ ಎಂಡ್ ಸರ್ಕಲ್ ನಲ್ಲಿ ನಡೆದಿರುವ ಕಾರು ಅಪಘಾತಕ್ಕೂ ತಮಗು ಯಾವುದೇ ಸಂಬಂಧವಿಲ್ಲ ಎಂದು ನಟ ಪ್ರಜ್ವಲ್ ದೇವರಾಜ್ ಸ್ಪಷ್ಟಪಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದ ತಮ್ಮ ಫೇಸ್ ಬುಕ್ ಖಾತೆಯಿಂದ ಲೈವ್ ನೀಡಿರುವ ಪ್ರಜ್ವಲ್, ಪ್ರಕರಣದಲ್ಲಿ ಮಾಧ್ಯಮಗಳು ನನ್ನ ಹೆಸರು ಸೇರಿಸಿದ್ದು ತಿಳಿದು ಬೇಸರವಾಯಿತು. ಸದ್ಯ ಗೋವಾದಲ್ಲಿ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದೇನೆ. ಆದರೆ ಸಾಮಾಜಿಕ ಕಾಳಜಿ ಇರಬೇಕಾದ ಕೆಲ ವಾಹಿನಿಗಳು ನಮ್ಮ ಕುಟುಂಬದ ಹೆಸರಿಗೆ ಧಕ್ಕೆ ತಂದಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಸುದ್ದಿ ವಾಹಿನಿಗಳೊಂದಿಗೆ ಮಾತನಾಡಿರುವ ನಟ ದಿಗಂತ್, ತಮ್ಮ ವಿರುದ್ಧ ಮಾಡಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ವಿಷ್ಣು ಪರಿಚಯವಿರುವುದು ನಿಜ. ಆದರೆ ಘಟನೆ ನಡೆದ ವೇಳೆ ನಾನು ಇರಲಿಲ್ಲ. ಪರಿಚಯವಿರುವ ಮಾತ್ರಕ್ಕೆ ನನ್ನ, ಪ್ರಜ್ವಲ್ ಹೆಸರು ಸೇರಿಸುವುದು ಸರಿಯಲ್ಲ. ಸದ್ಯ ಕನಕಪುರದ ಸಮೀಪದಲ್ಲಿ ತಮ್ಮ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಅದರಲ್ಲಿ ತಾವು ನಿರತರಾಗಿರುವುದಾಗಿ ಹೇಳಿದ್ದಾರೆ.

ನಿನ್ನೆ ಖ್ಯಾತ ಉದ್ಯಮಿ ದಿ. ಆದಿಕೇಶವುಲು ಮೊಮ್ಮಗ ವಿಷ್ಣುವಿನ ಕಾರು ಅಪಘಾತವಾಗಿತ್ತು. ವಿಷ್ಣುಸೇರಿದಂತೆ ಘಟನೆಯಲ್ಲಿ ಮೂವರಿಗೆ ಗಾಯವಾಗಿದೆ. ಕಾರಿನಲ್ಲಿ ಗಾಂಜಾ ಸಿಕ್ಕಿದ್ದು, ಘಟನಾ ಸಂದರ್ಭದಲ್ಲಿ ನಟರಾದ ಪ್ರಜ್ವಲ್ ದೇವರಾಜ್ ಮತ್ತು ದಿಗಂತ್ ಜತೆಯಲ್ಲಿದ್ದರು ಎನ್ನಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments