Webdunia - Bharat's app for daily news and videos

Install App

ಬಂಧನದ ಭಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್‌

sampriya
ಬುಧವಾರ, 29 ಮೇ 2024 (16:22 IST)
ಬೆಂಗಳೂರು: ಮಹಿಳೆಯರಿಗೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರು ಬಂಧನದ ಭಯದಲ್ಲಿ ಇಂದು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅಶ್ಲೀಲ ವಿಡಿಯೋ ವೈರಲ್‌ ಆಗುತ್ತಿದ್ದ ಬೆನ್ನಲ್ಲೇ ವಿದೇಶಕ್ಕೆ ಹೋಗಿರುವ ಪ್ರಜ್ವಲ್‌ ರೇವಣ್ಣ ಇದೇ 31ರಂದು ಬೆಂಗಳೂರಿಗೆ ಬರುವುದಾಗಿ ಹೇಳಿಕೊಂಡಿದ್ದಾರೆ.

ವಿಚಾರಣೆಗೆ ಎಸ್‌ಐಟಿಗೆ ಬೇಕಾಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ಏರ್‌ಪೋರ್ಟ್‌ನಲ್ಲಿ ವಶಕ್ಕೆ ಪಡೆಯಲು ಎಸ್‌ಐಟಿ ತಂಡ ಸಜ್ಜಾಗಿದೆ. ಇದೀಗ ಬಂಧನದಿಂದ ಪಾರಾಗಲು ಹಾಸನ ಸಂಸದ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಅವರು ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ತಮ್ಮ ವಿರುದ್ಧ ಸಿಐಡಿ ಠಾಣೆ, ಹೊಳೆನರಸೀಪುರ ಠಾಣೆ, ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾದ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

ಇದೀಗ ಅರ್ಜಿ ವಿಚಾರಣೆಯನ್ನು ನಾಳೆಯೇ  ಮಾಡುವಂತೆ ಪ್ರಜ್ವಲ್ ಪರ ವಕೀಲರು ಮನವಿ ಮಾಡಿದರು. ಆದರೆ ನಾಳೆ ವಿಚಾರಣೆ ಸಾಧ್ಯವಿಲ್ಲ ಎಂದ ಕೋರ್ಟ್, ಈ ಸಂಬಂಧ ಎಸ್ಐಟಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಮೇ 31ಕ್ಕೆ ನಿಗದಿಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ಮುಂದಿನ ಸುದ್ದಿ
Show comments