Webdunia - Bharat's app for daily news and videos

Install App

ಪ್ರಜ್ವಲ್ ಎಲ್ಲಿಗಾದರೂ ಹೋಗಿದ್ದರು ಹಿಡಿದು ತರ್ತೀವಿ: ಸಿಎಂ ಸಿದ್ದರಾಮಯ್ಯ

Sampriya
ಶುಕ್ರವಾರ, 3 ಮೇ 2024 (18:33 IST)
ಬಾಗಲಕೋಟೆ: ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಎಲ್ಲಿಗಾದರೂ ಹೋಗಿದ್ದರು ಹಿಡಿದು ಕರ್ಕೊಂಡು ಬರ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಡುಗಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರು ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ದುಬೈಗೆ ಪ್ರಯಾಣ ಬೆಳೆಸಿದ್ದಾರೆಯೇ ಎಂದು ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಜ್ವಲ್ ಎಲ್ಲಿಗಾದರೂ ಎಸ್ಕೇಪ್ ಆಗಿರಲಿ, ಯಾವುದೇ ದೇಶಕ್ಕೆ ಹೋಗಿರಲಿ, ಅಲ್ಲಿಂದ ಹಿಡಿದು ತರ್ತೀವಿ.

ಪ್ರಜ್ವಲ್ ರೇವಣ್ಣರ ಪಾಸ್‌ಪೋರ್ಟ್ ರದ್ದು ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದ್ದು, ಈ ಸಂಬಂಧ ಈಗಾಗಲೇ ನಾವು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ. ಆದರೆ ಕೇಂದ್ರ ಸರ್ಕಾರವೇ ಪ್ರಜ್ವಲ್‌ಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದರು.  

ಈ ಹಿಂದೆ ಕುಮಾರಸ್ವಾಮಿ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ನನ್ನ ಮಗ ಇದ್ದ ಹಾಗೆ. ನನ್ನ ಮಗ ಬೇರೆ ಅಲ್ಲ, ಪ್ರಜ್ವಲ್ ಬೇರೆ ಅಲ್ಲ ಅಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ. ಅವರು ಎಲ್ಲಾ ಕುಕೃತ್ಯವನ್ನು ಒಟ್ಟಿಗೆ ಮಾಡ್ತಾರೆ, ಆಮೇಲೆ ನಾವಲ್ಲ ಅಂತಾರೆ ಎಂದು ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments