Select Your Language

Notifications

webdunia
webdunia
webdunia
webdunia

ಪ್ರಜ್ವಲ ರಾಜಕೀಯ ಭವಿಷ್ಯ ದೇವೇಗೌಡರಿಂದ ತೀರ್ಮಾನ: ರೇವಣ್ಣ

ಪ್ರಜ್ವಲ ರಾಜಕೀಯ ಭವಿಷ್ಯ ದೇವೇಗೌಡರಿಂದ ತೀರ್ಮಾನ: ರೇವಣ್ಣ
ಬೆಂಗಳೂರು , ಶನಿವಾರ, 14 ಅಕ್ಟೋಬರ್ 2017 (15:56 IST)
ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್‌ರನ್ನು ಕಣಕ್ಕಿಳಿಸಬೇಕೇ ಎನ್ನುವ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಪ್ರಜ್ವಲ್‌ಗೆ ಇನ್ನೂ ರಾಜಕೀಯದಲ್ಲಿ ಬೆಳೆಯಲು ಸಮಯಾವಕಾಶವಿದೆ. ಅವಸರವಾಗಿ ಚುನಾವಣೆಗೆ ಸ್ಪರ್ಧಿಸುವುದು ಸರಿಯಲ್ಲ.  ಸೂಕ್ತ ಸಮಯದಲ್ಲಿ ದೇವೇಗೌಡರು ಮತ್ತು ಇತರ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
 
ನಮ್ಮ ಮುಂದೆ ವಿಧಾನಸಭೆ ಚುನಾವಣೆಯಿದೆ. ಪ್ರಜ್ವಲ್, ನಿಖಿಲ್ ಸೇರಿದಂತೆ ಪ್ರತಿಯೊಬ್ಬರು ಚುನಾವಣೆಯ ಗೆಲುವಿಗಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸಿ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿದೆ ಎಂದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸುವ ವಿಶ್ವಾಸವಿದೆ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ದೀಪಾವಳಿ ಹಬ್ಬದ ಪ್ರಯುಕ್ತ KSRTCಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ