Webdunia - Bharat's app for daily news and videos

Install App

ವಿಮಾನ ಟಿಕೆಟ್ ರದ್ದುಗೊಳಿಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಪ್ರಜ್ವಲ್ ರೇವಣ್ಣ

Krishnaveni K
ಸೋಮವಾರ, 13 ಮೇ 2024 (12:25 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ರೇಪ್ ಕೇಸ್ ನಲ್ಲಿ ಸಿಲುಕಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಈಗ ಮತ್ತೊಮ್ಮೆ ಬೆಂಗಳೂರಿಗೆ ಬರುವ ವಿಮಾನ ಟಿಕೆಟ್ ರದ್ದುಗೊಳಿಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾರೆ.

ಈ ಮೊದಲು ಪ್ರಜ್ವಲ್ ಮೇ 3 ರಂದು ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ನಿಗದಿಪಡಿಸಿದ್ದರು. ಆದರೆ ಇಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ಬಿಗಿಯಾಗುತ್ತಿದ್ದಂತೇ ಟಿಕೆಟ್ ರದ್ದುಗೊಳಿಸಿ ವಿದೇಶದಲ್ಲೇ ಉಳಿದುಕೊಂಡಿದ್ದರು. ಅದಾದ ಬಳಿಕ ಮೇ 15 ಕ್ಕೆ ವಾಪಸ್ ಬರಲು ಟಿಕೆಟ್ ನಿಗದಿಗೊಳಿಸಿದ್ದರು.

ಆದರೆ ಈಗ ಮೇ 15 ಕ್ಕೆ ನಿಗದಿಯಾಗಿದ್ದ ಟಿಕೆಟ್ ನ್ನೂ ರದ್ದುಗೊಳಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಅವರು ತಾನಾಗಿಯೇ ಬಂದು ಎಸ್ಐಟಿ ವಿಚಾರಣೆಗೆ ಹಾಜರಾಗುವ ನಿರೀಕ್ಷೆ ಸುಳ್ಳಾಗಿದೆ. ಇದೀಗ ಸ್ವತಃ ಎಸ್ಐಟಿ ತಂಡವೇ ವಿದೇಶಕ್ಕೆ ತೆರಳಿ ಪ್ರಜ್ವಲ್ ರನ್ನು ಹುಡುಕಾಡಿ ಬಂಧಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದೆ.

ಇದುವರೆಗೆ ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಅವರ ಬಂಧನಕ್ಕೆ ಬ್ಲೂ ಕಾರ್ನರ್ ನೋಟಿಸ್ ನಿಡಲಾಗಿದೆ. ಆದರೆ ಹಡಗು ಅಥವಾ ವಿಮಾನದಲ್ಲಿ ಅವರು ಪ್ರಯಾಣಿಸದೇ ಇರುವುದರಿಂದ ಸುಳಿವು ಪತ್ತೆಯಾಗಿಲ್ಲ. ಇದು ತನಿಖಾ ತಂಡಕ್ಕೆ ದೊಡ್ಡ ತಲೆನೋವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ