Select Your Language

Notifications

webdunia
webdunia
webdunia
webdunia

Prajwal Revanna ಪ್ರಕರಣ: ತಾಯಿ ಭವಾನಿ ರೇವಣ್ಣಗೆ ಭಾರೀ ಮುಜುಗರ

ಭವಾನಿ ರೇವಣ್ಣ

Sampriya

ಬೆಂಗಳೂರು , ಶನಿವಾರ, 3 ಮೇ 2025 (17:07 IST)
ಬೆಂಗಳೂರು: ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭವಾಗಲಿರುವ ಹಿನ್ನೆಲೆ ವಕೀಲರ ನೇಮಕಕ್ಕೆ ಸಮಯಾವಕಾಶ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು  ಹೈಕೋರ್ಟ್ ವಜಾ ಮಾಡಿದ್ದರಿಂದ ಭವಾನಿ ರೇವಣ್ಣಗೆ ಭಾರೀ ಹಿನ್ನಡೆಯಾಗಿದೆ.

ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ವಕೀಲರ ನೇಮಕಕ್ಕೆ ಸಮಯಾವಕಾಶ ನೀಡಲಾಗದು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ವಿಕ್ರಂ ಹುಯಿಲಗೋಳ, "ಹೊಸ ವಕೀಲರ ನೇಮಕಕ್ಕೆ ಕನಿಷ್ಠ 7 ದಿನ ಕಾಲಾವಕಾಶ ನೀಡಬೇಕು. ಏಕೆಂದರೆ ಎರಡು ಸಾವಿರ ಪುಟಕ್ಕೂ ಅಧಿಕ ದಾಖಲೆಗಳನ್ನು ವಕೀಲರು ಪರಿಶೀಲಿಸಬೇಕು. ಆದರೆ, ಸೂಕ್ತ ವಕೀಲರು ಸಿಗುತ್ತಿಲ್ಲವಾದ್ದರಿಂದ ಸ್ವಲ್ಪ ಸಮಯ ನೀಡಿ ಎಂದು ಮನವಿ ಮಾಡಲಾಯಿತು.

ಆದರೆ, ಭವಾನಿ ಪರ ವಕೀಲರ ವಾದಕ್ಕೆ ಎಸ್‌ಪಿಪಿ ಪ್ರೊ. ರವಿವರ್ಮ ಕುಮಾರ್‌ ಆಕ್ಷೇಪ ವ್ಯಕ್ತಪಡಿಸಿ, ಈ ರಿತಿ ಅರ್ಜಿಗಳನ್ನು ಸಲ್ಲಿಸಿ ಕೋರ್ಟ್‌ಗೆ ವಂಚಿಸುತ್ತಿದ್ದಾರೆ. ಹಾಗಾಗಿ, ಭವಾನಿ ರೇವಣ್ಣ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಕೋರಿದರು.

Share this Story:

Follow Webdunia kannada

ಮುಂದಿನ ಸುದ್ದಿ

India Pakistan: ಸಿಂಧೂ ನದಿಯಲ್ಲಿ ಏನೇ ನಿರ್ಮಾಣ ಮಾಡಿದರೂ ಭಾರತದ ಮೇಲೆ ದಾಳಿ ಮಾಡ್ತೇವೆ: ಪಾಕ್ ಸಚಿವ