Prajwal Revanna ಪ್ರಕರಣ: ತಾಯಿ ಭವಾನಿ ರೇವಣ್ಣಗೆ ಭಾರೀ ಮುಜುಗರ

Sampriya
ಶನಿವಾರ, 3 ಮೇ 2025 (17:07 IST)
ಬೆಂಗಳೂರು: ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭವಾಗಲಿರುವ ಹಿನ್ನೆಲೆ ವಕೀಲರ ನೇಮಕಕ್ಕೆ ಸಮಯಾವಕಾಶ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು  ಹೈಕೋರ್ಟ್ ವಜಾ ಮಾಡಿದ್ದರಿಂದ ಭವಾನಿ ರೇವಣ್ಣಗೆ ಭಾರೀ ಹಿನ್ನಡೆಯಾಗಿದೆ.

ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಎಸ್‌. ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ವಕೀಲರ ನೇಮಕಕ್ಕೆ ಸಮಯಾವಕಾಶ ನೀಡಲಾಗದು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ವಿಕ್ರಂ ಹುಯಿಲಗೋಳ, "ಹೊಸ ವಕೀಲರ ನೇಮಕಕ್ಕೆ ಕನಿಷ್ಠ 7 ದಿನ ಕಾಲಾವಕಾಶ ನೀಡಬೇಕು. ಏಕೆಂದರೆ ಎರಡು ಸಾವಿರ ಪುಟಕ್ಕೂ ಅಧಿಕ ದಾಖಲೆಗಳನ್ನು ವಕೀಲರು ಪರಿಶೀಲಿಸಬೇಕು. ಆದರೆ, ಸೂಕ್ತ ವಕೀಲರು ಸಿಗುತ್ತಿಲ್ಲವಾದ್ದರಿಂದ ಸ್ವಲ್ಪ ಸಮಯ ನೀಡಿ ಎಂದು ಮನವಿ ಮಾಡಲಾಯಿತು.

ಆದರೆ, ಭವಾನಿ ಪರ ವಕೀಲರ ವಾದಕ್ಕೆ ಎಸ್‌ಪಿಪಿ ಪ್ರೊ. ರವಿವರ್ಮ ಕುಮಾರ್‌ ಆಕ್ಷೇಪ ವ್ಯಕ್ತಪಡಿಸಿ, ಈ ರಿತಿ ಅರ್ಜಿಗಳನ್ನು ಸಲ್ಲಿಸಿ ಕೋರ್ಟ್‌ಗೆ ವಂಚಿಸುತ್ತಿದ್ದಾರೆ. ಹಾಗಾಗಿ, ಭವಾನಿ ರೇವಣ್ಣ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಕೋರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments