Webdunia - Bharat's app for daily news and videos

Install App

ಪ್ರಜ್ವಲ್ ರೇವಣ್ಣಗೆ ಎಷ್ಟು ವರ್ಷ ಶಿಕ್ಷೆ, ನ್ಯಾಯಾಧೀಶರು ದೋಷಿಗೆ ಏನು ಕೇಳ್ತಾರೆ

Krishnaveni K
ಶನಿವಾರ, 2 ಆಗಸ್ಟ್ 2025 (08:37 IST)
Photo Credit: X
ಬೆಂಗಳೂರು: ಮನೆಗೆಲಸದಾಕೆ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದೆ. ಅವರ ಶಿಕ್ಷೆ ಪ್ರಮಾಣ ಇಂದು ಪ್ರಕಟವಾಗಬೇಕಿದೆ.

ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಫಾರ್ಮ್ ಹೌಸ್ ಮತ್ತು ಬಸವನಗುಡಿಯ ಮನೆಯಲ್ಲಿ ಒಂದುಕ್ಕಿಂತ ಹೆಚ್ಚು ಬಾರಿ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರವೆಸಗಿದ್ದಲ್ಲದೆ ವಿಡಿಯೋ ಕೂಡಾ ಮಾಡಿಕೊಂಡಿದ್ದರು. ಈ ಪ್ರಕರಣದಲ್ಲಿ ಬಸವನಗುಡಿಯ ಪ್ರಜ್ವಲ್ ನಿವಾಸದಲ್ಲಿ ಸಿಕ್ಕ ಮಹಿಳೆಯ ಬಟ್ಟೆಯಲ್ಲಿ ವೀರ್ಯಾಣು ಪತ್ತೆಯಾಗಿತ್ತು. ಎಫ್ಎಸ್ಎಲ್ ವರದಿಯಲ್ಲಿ ಪ್ರಜ್ವಲ್ ನದ್ದೇ ವೀರ್ಯಾಣು ಎಂಬುದು ಖಚಿತವಾಗಿತ್ತು.

ಇದಲ್ಲದೆ ಅನೇಕ ಸಾಕ್ಷ್ಯಗಳು ಪ್ರಜ್ವಲ್ ವಿರುದ್ಧವಾಗಿದ್ದವು. ಹೀಗಾಗಿ ನಿನ್ನೆ ನ್ಯಾ. ಸಂತೋಷ್ ಗಜನಾನನ ಭಟ್ ಪ್ರಜ್ವಲ್ ದೋಷಿ ಎಂದು ತೀರ್ಪು ಪ್ರಕಟಿಸಿದ್ದರು. ಆದರೆ ಇಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿದ್ದರು. ಹೀಗಾಗಿ ಇಂದೂ ಪ್ರಜ್ವಲ್ ಮತ್ತೊಮ್ಮೆ ನ್ಯಾಯಾಧೀಶರ ಮುಂದೆ ಹಾಜರಾಗಬೇಕಿದೆ.

ನಿನ್ನೆಯೂ ಕೋರ್ಟ್ ಗೆ ಪ್ರಜ್ವಲ್ ನನ್ನುಹಾಜರುಪಡಿಸಲಾಗಿತ್ತು. ತೀರ್ಪು ಪ್ರಕಟವಾಗುತ್ತಿದ್ದಂತ ಕಣ್ಣೀರು ಹಾಕುತ್ತಾ ಅಲ್ಲಿಂದ ತೆರಳಿದ್ದರು. ಇದೀಗ ಇಂದು ಮತ್ತೊಮ್ಮೆ ಶಿಕ್ಷೆಯ ಪ್ರಮಾಣ ಪ್ರಕಟಿಸಲು ಪ್ರಜ್ವಲ್ ನನ್ನು ಹಾಜರುಪಡಿಸಲಾಗುತ್ತದೆ. ಇನ್ನು ಶಿಕ್ಷೆ ಪ್ರಮಾಣ ಪ್ರಕಟಿಸುವಾಗ ಪ್ರಜ್ವಲ್ ಗೂ ನ್ಯಾಯಾಧೀಶರು ಮಾತನಾಡಲು ಅವಕಾಶ ಕೊಡುತ್ತಾರೆ. ಆಗ ಪ್ರಜ್ವಲ್ ಇನ್ನು ಮುಂದೆ ಈ ರೀತಿ ಮಾಡಲ್ಲ, ವಿನಾಯ್ತಿ ಕೊಡಿ ಎಂದು ಕೇಳಬಹುದು. ಪ್ರಜ್ವಲ್ ಪರ ವಕೀಲರು ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ಮನವಿ ಮಾಡಬಹುದು.  ಒಂದು ವೇಳೆ ಪ್ರಜ್ವಲ್ ಗೆ ಜೀವಾವಧಿ ಶಿಕ್ಷೆ ಘೋಷಿಸಿದರೆ 14 ವರ್ಷ ಜೈಲು ಶಿಕ್ಷೆ ಅನುಭವಿಸಿ ಬಳಿಕ ಸನ್ನಡತೆ ತೋರಿದರೆ ಸರ್ಕಾರ ಬಿಡುಗಡೆಗೆ ಅಸ್ತು ಎನ್ನಬಹುದು. ಜೀವಿತಾವಧಿ ಶಿಕ್ಷೆ ಎಂದರೆ ಜೀವನ ಪರ್ಯಂತ ಜೈಲಿನಲ್ಲೇ ಕಳೆಯಬೇಕಾಗುತ್ತದೆ. ಹೀಗಾಗಿ ನಾಳೆ ಪ್ರಜ್ವಲ್ ಪಾಲಿಗೆ ಮಹತ್ವದ ದಿನವಾಗಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಎರಡು ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಮುಂದಿನ ಸುದ್ದಿ
Show comments