Webdunia - Bharat's app for daily news and videos

Install App

ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ ಪ್ರಜ್ವಲ್ ರೇವಣ್ಣ

Krishnaveni K
ಬುಧವಾರ, 12 ಜೂನ್ 2024 (10:27 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಮಾನ್ಯ ಖೈದಿಯಂತೇ ಕಾಲ ಕಳೆಯುತ್ತಿದ್ದಾರೆ.
 

ಈ ಹಿಂದೆ ಎಚ್ ಡಿ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಿದಾಗ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಚ, ಹಾಸಿಗೆ ಎಂದು ಸವಲತ್ತು ನೀಡಲಾಗಿತ್ತು. ಆದರೆ ಪ್ರಜ್ವಲ್ ರೇವಣ್ಣಗೆ ಯಾವುದೇ ವಿಶೇಷ ಸೌಲಭ್ಯ ನೀಡಲಾಗಿಲ್ಲ. ಸಾಮಾನ್ಯ ಖೈದಿಯಂತೇ ನಡೆಸಿಕೊಳ್ಳಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಏಕಾಂಗಿಯಾಗಿದ್ದಾರೆ. ಅವರು ಬಯಸಿದರೆ ಮಾತ್ರ ದಿನದಲ್ಲಿ 30 ನಿಮಿಷ ಲಾನ್ ನಲ್ಲಿ ಓಡಾಡಲು ಅವಕಾಶ ನೀಡಲಾಗುತ್ತದೆ. ಆದರೆ ಅವರು ತಮ್ಮ ಕೊಠಡಿಯಲ್ಲೇ ಮೌನಕ್ಕೆ ಶರಣಾಗಿ ಕುಳಿತಿರುತ್ತಾರೆ ಎಂದು ತಿಳಿದುಬಂದಿದೆ. ಅವರ ರಕ್ಷಣೆಗೆ ಕೊಠಡಿಯ ಸಮೀಪದಲ್ಲಿ ಓರ್ವ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕಳೆದ ಎರಡು ದಿನಗಳಿಂದ ಪ್ರಜ್ವಲ್ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಅವರಿಗೂ ಇತರೆ ಖೈದಿಗಳಂತೆ ಸಹ ಖೈದಿಗಳೇ ತಯಾರಿಸಿದ ಆಹಾರವನ್ನು ತಳ್ಳುಗಾಡಿಯಲ್ಲಿ ತಂದು ಜೈಲು ಕೋಣೆಯ ಬಳಿ ತಂದು ಕೊಡಲಾಗಿದೆ. ಮಧ್ಯಾಹ್ನದ ಊಟಕ್ಕೆ ಎಲ್ಲರಿಗೂ ನೀಡುವಂತೆ ಮುದ್ದೆ, ಅನ್ನ, ಸಾರು ನೀಡಲಾಗಿದೆ. ಇದರ ಹೊರತಾಗಿ ಅವರು ಯಾರ ಜೊತೆಯೂ ಮಾತನಾಡುವ ಪ್ರಯತ್ನ ಮಾಡುತ್ತಿಲ್ಲ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ