Webdunia - Bharat's app for daily news and videos

Install App

ಏನ್ರೀ ನಿಮ್ದು ಫ್ಯಾಮಿಲಿ ಡ್ರಾಮಾ? ಪ್ರಜ್ವಲ್ ರೇವಣ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

Webdunia
ಶನಿವಾರ, 25 ಮೇ 2019 (07:09 IST)
ಬೆಂಗಳೂರು: ತಾತ ದೇವೇಗೌಡರು ತುಮಕೂರಿನಲ್ಲಿ ಸ್ಪರ್ಧಿಸಿ ಸೋತಿದ್ದಕ್ಕೆ ತಾವು ಗೆದ್ದ ಹಾಸನ ಕ್ಷೇತ್ರಕ್ಕೆ ರಾಜೀನಾಮೆ ಕೊಡಲು ಮುಂದಾದ ಪ್ರಜ್ವಲ್ ರೇವಣ್ಣಗೆ ಜನರ ಆಕ್ರೋಶದ ಬಿಸಿ ತಾಗಿದೆ.


ತನಗಾಗಿ ಹಾಸನ ಕ್ಷೇತ್ರ ಬಿಟ್ಟುಕೊಟ್ಟು ತುಮಕೂರಿನಿಂದ ಸ್ಪರ್ಧಿಸಿದ್ದ ಗೌಡರು ಸೋತಿದ್ದಕ್ಕೆ ಪ್ರಜ್ವಲ್ ನಾನು ತಾತನಿಗಾಗಿ ನನ್ನ ಸಂಸದ  ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೊಂಡಿದ್ದರು. ಮತ್ತೆ ಹಾಸನದಿಂದ ದೇವೇಗೌಡರು ಸ್ಪರ್ಧಿಸಿ ಅವರನ್ನು ಸಂಸದರನ್ನಾಗಿ ಮಾಡಲು ಯೋಜನೆ ಹಾಕಿದ್ದರು.

 ಆದರೆ ಪ್ರಜ್ವಲ್ ಸುದ್ದಿಗೋಷ್ಠಿಯಲ್ಲಿ ಈ ಹೇಳಿಕೆ ನೀಡಿದ್ದಕ್ಕೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇನ್ನೊಮ್ಮೆ ಎಲೆಕ್ಷನ್ ಖರ್ಚು ಯಾರು ನಿಮ್ಮ ಕುಟುಂಬ ಭರಿಸತ್ತಾ? ನಿಮ್ಮ ಫ್ಯಾಮಿಲಿ ಡ್ರಾಮಾಗೆ ನಮ್ಮ ತೆರಿಗೆ ಹಣ ಯಾಕೆ ಪೋಲು ಮಾಡುತ್ತೀರಾ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಕೆಲವರು ಇದು ಪ್ರಜ್ವಲ್ ರೇವಣ್ಣ ನಾಮಪತ್ರದ ಗೊಂದಲದ ಕೇಸು ನ್ಯಾಯಾಲಯದಲ್ಲಿದ್ದು, ಇದರ ವಿಚಾರಣೆ ನಡೆದು ಸಂಸತ್ ಸ್ಥಾನ ಅನರ್ಹಗೊಂಡರೆ ಜೆಡಿಎಸ್ ಗೆ ಇದ್ದ ಒಂದು ಸೀಟೂ ನಷ್ಟವಾಗುತ್ತದೆ ಎಂದು ಈ ಡ್ರಾಮಾ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments