Webdunia - Bharat's app for daily news and videos

Install App

ಏನ್ರೀ ನಿಮ್ದು ಫ್ಯಾಮಿಲಿ ಡ್ರಾಮಾ? ಪ್ರಜ್ವಲ್ ರೇವಣ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

Webdunia
ಶನಿವಾರ, 25 ಮೇ 2019 (07:09 IST)
ಬೆಂಗಳೂರು: ತಾತ ದೇವೇಗೌಡರು ತುಮಕೂರಿನಲ್ಲಿ ಸ್ಪರ್ಧಿಸಿ ಸೋತಿದ್ದಕ್ಕೆ ತಾವು ಗೆದ್ದ ಹಾಸನ ಕ್ಷೇತ್ರಕ್ಕೆ ರಾಜೀನಾಮೆ ಕೊಡಲು ಮುಂದಾದ ಪ್ರಜ್ವಲ್ ರೇವಣ್ಣಗೆ ಜನರ ಆಕ್ರೋಶದ ಬಿಸಿ ತಾಗಿದೆ.


ತನಗಾಗಿ ಹಾಸನ ಕ್ಷೇತ್ರ ಬಿಟ್ಟುಕೊಟ್ಟು ತುಮಕೂರಿನಿಂದ ಸ್ಪರ್ಧಿಸಿದ್ದ ಗೌಡರು ಸೋತಿದ್ದಕ್ಕೆ ಪ್ರಜ್ವಲ್ ನಾನು ತಾತನಿಗಾಗಿ ನನ್ನ ಸಂಸದ  ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿಕೊಂಡಿದ್ದರು. ಮತ್ತೆ ಹಾಸನದಿಂದ ದೇವೇಗೌಡರು ಸ್ಪರ್ಧಿಸಿ ಅವರನ್ನು ಸಂಸದರನ್ನಾಗಿ ಮಾಡಲು ಯೋಜನೆ ಹಾಕಿದ್ದರು.

 ಆದರೆ ಪ್ರಜ್ವಲ್ ಸುದ್ದಿಗೋಷ್ಠಿಯಲ್ಲಿ ಈ ಹೇಳಿಕೆ ನೀಡಿದ್ದಕ್ಕೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇನ್ನೊಮ್ಮೆ ಎಲೆಕ್ಷನ್ ಖರ್ಚು ಯಾರು ನಿಮ್ಮ ಕುಟುಂಬ ಭರಿಸತ್ತಾ? ನಿಮ್ಮ ಫ್ಯಾಮಿಲಿ ಡ್ರಾಮಾಗೆ ನಮ್ಮ ತೆರಿಗೆ ಹಣ ಯಾಕೆ ಪೋಲು ಮಾಡುತ್ತೀರಾ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಕೆಲವರು ಇದು ಪ್ರಜ್ವಲ್ ರೇವಣ್ಣ ನಾಮಪತ್ರದ ಗೊಂದಲದ ಕೇಸು ನ್ಯಾಯಾಲಯದಲ್ಲಿದ್ದು, ಇದರ ವಿಚಾರಣೆ ನಡೆದು ಸಂಸತ್ ಸ್ಥಾನ ಅನರ್ಹಗೊಂಡರೆ ಜೆಡಿಎಸ್ ಗೆ ಇದ್ದ ಒಂದು ಸೀಟೂ ನಷ್ಟವಾಗುತ್ತದೆ ಎಂದು ಈ ಡ್ರಾಮಾ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments