ಪ್ರಜ್ವಲ್ ರೇವಣ್ಣ ಒಬ್ಬ ನಾಲಾಯಕ್ ಸಂಸದ, ವಿಕೃತ ಕಾಮಿ: ಪುಷ್ಪಾ ಅಮರನಾಥ್ ಆಕ್ರೋಶ

Sampriya
ಬುಧವಾರ, 1 ಮೇ 2024 (16:05 IST)
ಬೀದರ್: ಸಂಸದ ಪ್ರಜ್ವಲ್ ರೇವಣ್ಣ ಒಬ್ಬ ನಾಲಾಯಕ್ ಸಂಸದ. ಆತನಿಗೆ ನಿರ್ಭಯಾ ಅತ್ಯಾಚಾರ, ವಿಕೃತಕಾಮಿ ಉಮೇಶ್ ರೆಡ್ಡಿ ಪ್ರಕರಣದ ಮಾದರಿಯಲ್ಲಿ ಆತನಿಗೆ ಶಿಕ್ಷೆ ವಿಧಸಬೇಕು. ನೀಡುವ ಶಿಕ್ಷೆ ಮೂಲಕ ಮತ್ತೇ ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸಬಾರದೆಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾದ್ಯಕ್ಷೆ ಪುಷ್ಪಾ ಅಮರನಾಥ್ ಆಗ್ರಹಿಸಿದರು.

ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿಯಾಗಿರುವ  ಸಂಸದ ಪ್ರಜ್ವಲ್ ರೇವಣ್ಣಗೆ ಸೂಕ್ತ ಶಿಕ್ಷೆಯಾಗಬೇಕು. ಇಂದು ಪೆನ್‌ಡ್ರೈವ್‌ ಪ್ರಕರಣದಲ್ಲಿರುವ ಮಹಿಳೆಯರು ಇದ್ದೂ ಸತ್ತಂತಿದ್ದಾರೆ. ಆದರೆ ಬಿಜೆಪಿಯವರು ಈ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ನಾರಿಶಕ್ತಿ, ಮಹಿಳಾ ಸಬಲೀಕರಣ, ಬೇಟಿ ಬಚಾವೋ ಬೇಟಿ ಪಡಾವೋ ಎಂದು ಬಿಜೆಪಿಯವರು ಹೇಳುತ್ತಾರೆ. ಪ್ರಧಾನಿ ಮೋದಿ ಅವರು ಅವರ ಭಾಷಣಗಳಲ್ಲಿ ಮಹಿಳೆಯರ ಬದುಕು ಬಂಗಾರ ಮಾಡುತ್ತೇವೆ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಮೋದಿ ಅವರ ಪರಿವಾರದಲ್ಲಿ ಕೊಲೆಗಡುಕರು ಇದ್ದಾರೆಯೇ? ಇಂತಹವರ ರಕ್ಷಣೆಗೆ ಕೇಂದ್ರ ಸರ್ಕಾರವಿದೆಯೇ? ಬಿಲ್ಕಿಸ್ ಬಾನು, ಉನ್ನಾವ್ ದಲ್ಲಿ ಜೀವಂತ ಸುಟ್ಟರೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದರು.

ಇನ್ನೂ ಪೆನ್‌ಡ್ರೈವ್ ಪ್ರಕರಣ ವೈರಲ್‌ ಆಗುತ್ತಿದ್ದ ಹಾಗೇ ಪ್ರಜ್ವಲ್ ದೇಶ ಬಿಟ್ಟು ಹೋಗುವಂತೆ ಸಹಾಯ ಮಾಡಿದವರಾರು. ವಿಮಾನ ನಿಲ್ದಾಣ ಪ್ರಾಧಿಕಾರ, ಪಾಸ್ ಪೋರ್ಟ್ ಇಲಾಖೆ ಕೇಂದ್ರದ ವ್ಯಾಪ್ತಿಗೆ ಬರುತ್ತೆ. ಹೀಗಿದ್ದರೂ ತಡೆಯಲಿಲ್ಲವೇಕೆ? ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ