ಪ್ರಶ್ನೆ ಹಾಕುವ ಎಸ್ಐಟಿಗೇ ಪ್ರಶ್ನೆ ಮಾಡಿದ ಪ್ರಜ್ವಲ್ ರೇವಣ್ಣ

Krishnaveni K
ಶನಿವಾರ, 1 ಜೂನ್ 2024 (12:53 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿತರಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತನಿಖಾಧಿಕಾರಿಗಳನ್ನೇ ಪ್ರಶ್ನೆ ಮಾಡಿದ್ದಾರೆ.

ಇಂದಿಡೀ ಪ್ರಜ್ವಲ್ ರೇವಣ್ಣರನ್ನು ವಿಚಾರಣೆ ನಡೆಸಲಾಗುತ್ತದೆ. ನಿನ್ನೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಪ್ರಜ್ವಲ್ ರನ್ನು ಆರು ದಿನಗಳ ಕಾಲ ಎಸ್ಐಟಿ ವಶಕ್ಕೊಪ್ಪಿಸಲಾಗಿತ್ತು.

ಇದೀಗ ಎಸ್ಐಟಿ ತಂಡ ಪ್ರಜ್ವಲ್ ರೇವವಣ್ಣರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ವಿಚಾರಣೆ ನಡೆಸುತ್ತಿದೆ. ಪ್ರಕರಣದ ಬಗ್ಗೆ ಏನೇ ಪ್ರಶ್ನೆ ಕೇಳಿದರೂ ನನಗೆ ಗೊತ್ತಿಲ್ಲ, ಮಾಹಿತಿಯಿಲ್ಲ ಎಂದೇ ಪ್ರಜ್ವಲ್ ಹೇಳುತ್ತಿದ್ದಾರೆ.

ಈ ನಡುವೆ ತಮ್ಮನ್ನು ಪ್ರಶ್ನೆ ಮಾಡುತ್ತಿರುವ ತನಿಖಾಧಿಕಾರಿಗಳಿಗೇ ಪ್ರಜ್ವಲ್ ಮರುಪ್ರಶ್ನೆ ಮಾಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದವರು ಯಾರು ಎಂದು ಕೇಳಿದ್ದಾರೆ. ನಮ್ಮ ತೋಟ, ಮನೆಯಲ್ಲಿ ಕೆಲಸ ಮಾಡುವ ಹಲವು ಮಹಿಳೆಯರಿದ್ದಾರೆ. ಅವರ ಪೈಕಿ ನನ್ನ ವಿರುದ್ಧ ದೂರು ಕೊಟ್ಟವರು ಯಾರು ಎಂದೇ ನನಗೆ ಗೊತ್ತಿಲ್ಲ. ನನ್ನ ವಿರುದ್ಧ ದೂರು ಕೊಟ್ಟವರು ಯಾರು ಎಂದು ಎಸ್ಐಟಿ ಅಧಿಕಾರಿಗಳಿಗೆ ಮರುಪ್ರಶ್ನೆ ಮಾಡಿದ್ದಾರೆ.

ಆಗ ಅಧಿಕಾರಿಗಳು ಪ್ರಜ್ವಲ್ ಗೆ ಸಂತ್ರಸ್ತ ಮಹಿಳೆಯರ ಫೋಟೋ ತೋರಿಸಿದ್ದಾರೆ. ಆದರೆ ಅವರನ್ನು ನೋಡಿದ ಪ್ರಜ್ವಲ್ ಇವರೆಲ್ಲಾ ಯಾರು ಅಂತಾನೇ ನನಗೆ ಗೊತ್ತಿಲ್ಲ. ನಾಲ್ಕು ವರ್ಷದ ಹಿಂದೆ ನಡೆದಿದ್ದಾದರೆ ಇಷ್ಟು ದಿನ ಯಾಕೆ ದೂರು ಕೊಟ್ಟಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ