ಪ್ರಜ್ವಲ್ ರೇವಣ್ಣ ರಾಸಲೀಲೆ ಸೀರೆ, ಒಳ ಉಡುಪಿನಿಂದಲೇ ಪಕ್ಕಾ ಆಯ್ತು

Krishnaveni K
ಬುಧವಾರ, 16 ಅಕ್ಟೋಬರ್ 2024 (09:28 IST)
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತೆಯ ಸೀರೆ, ಒಳ ಉಡುಪಿನಿಂದ ಪ್ರಜ್ವಲ್ ಮೇಲಿನ ಆರೋಪ ಕನ್ ಫರ್ಮ್ ಆಗಿದೆ ಎನ್ನಲಾಗಿದೆ.

ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಮೇಲೆ ಹಾಸನ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣವೂ ಇದೆ. ಈ ಪ್ರಕರಣದಲ್ಲಿ ಪ್ರಜ್ವಲ್ ಭಾಗಿಯಾಗಿದ್ದು ಡಿಎನ್ ಎ ಪರೀಕ್ಷೆಯಿಂದ ಹೆಚ್ಚು ಕಡಿಮೆ ಪಕ್ಕಾ ಆಗಿದೆ ಎನ್ನಲಾಗಿದೆ.

ಮನೆ ಕೆಲಸದವರು ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆಯ ಮನೆಯಲ್ಲಿ ಪತ್ತೆಯಾದ ಸೀರೆಗಳು, ಒಳ ಉಡುಪುಗಳಲ್ಲಿ ಸಿಕ್ಕಿದ ವೀರ್ಯಾಣು ಸ್ಯಾಂಪಲ್ ಗೂ ಪ್ರಜ್ವಲ್ ವೀರ್ಯಾಣು ಸ್ಯಾಂಪಲ್ ಗೂ ಮ್ಯಾಚ್ ಆಗುತ್ತಿದೆ ಎಂದು ವರದಿಯಾಗಿದೆ. ಪ್ರಜ್ವಲ್ ಕೃತ್ಯ ನಡೆಸಿದ್ದರು ಎನ್ನಲಾದ ಹಾಸನದ ತೋಟದ ಮನೆ, ಸಂಸದರ ಅತಿಥಿ ಗೃಹ, ಬಸವನಗುಡಿಯ ಮನೆ ಸೇರಿದಂತೆ ಘಟನಾ ಸ್ಥಳದಿಂದ ಸೀರೆ, ಪೆಟ್ಟಿಕೋಟ್ ಸೇರಿದಂತೆ ಒಳ ಉಡುಪುಗಳನ್ನು ತನಿಖಾ ತಂಡ ಜಪ್ತಿ ಮಾಡಿ ಡಿಎನ್ ಎ ಪರೀಕ್ಷೆಗೊಳಪಡಿಸಿತ್ತು.

ಇದೀಗ ಡಿಎನ್ ಎ ಪರೀಕ್ಷೆ ವರದಿ ಬಂದ ಹಿನ್ನಲೆಯಲ್ಲಿ ಪ್ರಜ್ವಲ್ ವಿರುದ್ಧ ಮತ್ತೊಮ್ಮೆ ತನಿಖಾ ತಂಡ ಹೆಚ್ಚುವರಿ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆ ಮಾಡಲಿದೆ. ಇದೀಗ ಸಂತ್ರಸ್ತೆಯ ಸೀರೆಗಳಿಂದಲೇ ಪ್ರಜ್ವಲ್ ಗೆ ಮತ್ತಷ್ಟು ಕಂಟಕ ಎದುರಾಗುವ ಸಾಧ್ಯತೆ ಕಂಡುಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ