Webdunia - Bharat's app for daily news and videos

Install App

ಅಜ್ಜನ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ

Sampriya
ಗುರುವಾರ, 28 ಮಾರ್ಚ್ 2024 (13:54 IST)
Photo Courtesy X
ಹಾಸನ: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು ಇಂದು ಹಾಸನ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿ ಸಿ.ಸತ್ಯಭಾಮಗೆ ಪ್ರಜ್ವಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಶಾಸಕರಾದ ಹೆಚ್‌ಡಿ ರೇವಣ್ಣ, ಎ.ಮಂಜು, ಹೆಚ್‌ಪಿ ಸ್ವರೂಪ್ ಪ್ರಕಾಶ್, ಸಿಎನ್ ಬಾಲಕೃಷ್ಣ ಇದ್ದರು.

ನಾಮಪತ್ರ ಸಲ್ಲಿಕೆ ಮುನ್ನಾ ಪ್ರಜ್ವಲ್ ರೇವಣ್ಣ ಅವರು ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ನಾಮಪತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಎಚ್‌ಡಿ ದೇವೇಗೌಡರ ಆಶೀರ್ವಾದ ಪಡೆದ ಪ್ರಜ್ವಲ್:  ನಾಮಪತ್ರ ಸಲ್ಲಿಕೆಗೂ ಮುನ್ನ ಹುಟ್ಟೂರು ಹರದನಹಳ್ಳಿಯಲ್ಲಿರುವ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆಶೀರ್ವಾದ ಪಡೆದಿದರು.  ಸೂಚಕರಾಗಿ ನಾಮಪತ್ರಕ್ಕೆ ಸಹಿ ಮಾಡಿ ಹೆಚ್‌ಡಿ ಮೊಮ್ಮಗನಿಗೆ ಹಾರೈಸಿದ್ದಾರೆ.

ವಿಶೇಷ ಎಂದರೆ ಮಗನ ನಾಮಪತ್ರ ಸಲ್ಲಿಕೆ ಹಿನ್ನೆಲೆ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರು ಬರಿಗಾಲಿನಲ್ಲೇ  ಚುನಾವಣಾಧಿಕಾರಿಗಳ ಕಾರ್ಯಾಲಯಕ್ಕೆ ತೆರಳಿ ಮಗನ ನಾಮಪತ್ರ ಸಲ್ಲಿಕೆ ಕಾರ್ಯದಲ್ಲಿ ಭಾಗಿಯಾಗಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments