Webdunia - Bharat's app for daily news and videos

Install App

ಚಿಕ್ಕಪ್ಪ ಕುಮಾರಸ್ವಾಮಿ ವಿರುದ್ಧವೇ ತೊಡೆತಟ್ಟಿದ ಪ್ರಜ್ವಲ್ ರೇವಣ್ಣ?

Webdunia
ಗುರುವಾರ, 6 ಜುಲೈ 2017 (21:10 IST)
ಚಿಕ್ಕಪ್ಪ ಕುಮಾರಸ್ವಾಮಿ ವಿರುದ್ಧವೇ ತೊಡೆತಟ್ಟಿದ ಪ್ರಜ್ವಲ್ ರೇವಣ್ಣ, ಪಕ್ಷದಲ್ಲಿ ಸೂಟ್‌ಕೇಸ್ ಸಂಸ್ಕ್ರತಿಯಿದೆ ಎಂದು ವಾಗ್ದಾಳಿ ನಡೆಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ನಮ್ಮ ಪಕ್ಷದಲ್ಲಿ ಒಂದು ರೋಗವಿದೆ. ಜೆಡಿಎಸ್ ಪಕ್ಷದಲ್ಲಿ ನಿಷ್ಠೆಯಿಂದ ಕಾರ್ಯನಿರ್ವಹಿಸಿದವರಿಗೆ ಹಿಂದಿನ ಸೀಟ್‌ನಲ್ಲಿ ಸ್ಥಳ ದೊರೆಯುತ್ತದೆ. ಸೂಟ್‌ಕೇಸ್‌ನಲ್ಲಿ ಹಣ ತಂದವರಿಗೆ ಮಾತ್ರ ಮುಂದಿನ ಸೀಟ್ ದೊರೆಯುತ್ತದೆ ಎಂದು ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಾರೆ.
 
ದೇವೇಗೌಡರ ಮೊಮ್ಮಗ, ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ, ಹುಣಸೂರಿನ ಗೌರಮ್ಮ ಪುಟ್ಟಸ್ವಾಮಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಬಂಡಾಯವನ್ನು ಬೀದಿಗೆ ಹಾಕಿದ್ದಾರೆ.
 
ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಕ್ಷದ ವಿರುದ್ದವೇ ಬಂಡಾಯದ ರಣಕಹಳೆ ಮೊಳಗಿಸಿದ ಅವರು, ದೂರದ ಬೆಟ್ಟ ನುಣ್ಣಗೆ ಕಾಣುತ್ತದೆ. ಆದರೆ, ಹತ್ತಿರ ಹೋಗಿ ನೋಡಿದಲ್ಲಿ ಗಿಡ, ಮುಳ್ಳುಗಳು ಕಾಣುತ್ತವೆ ಎಂದು ವ್ಯಂಗ್ಯವಾಡಿದರು.
 
ಹುಣಸೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿರುವ ಪ್ರಜ್ವಲ್, ಮಾಜಿ ಸಂಸದ ಎಚ್.ವಿಶ್ವನಾಥ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ನಂತರ ತಮಗೆ ಟಿಕೆಟ್ ದೊರೆಯುತ್ತದೆಯೋ ಇಲ್ಲವೋ ಎನ್ನುವ ಅನುಮಾನ ಅವರನ್ನು ಕಾಡುತ್ತಿದೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments