Webdunia - Bharat's app for daily news and videos

Install App

ಎಸ್ ಐಟಿ ನೋಟಿಸ್ ಬೆನ್ನಲ್ಲೇ ಭಾರತಕ್ಕೆ ಮರಳಲು ರೆಡಿಯಾದ ಪ್ರಜ್ವಲ್ ರೇವಣ್ಣ

Krishnaveni K
ಬುಧವಾರ, 1 ಮೇ 2024 (14:05 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ಆರೋಪ ಹೊತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿದೇಶದಿಂದ ಬರಲು ಸಜ್ಜಾಗಿದ್ದಾರೆ.

ತಮ್ಮ ಮೇಲೆ ಆರೋಪ ಕೇಳಿಬರುತ್ತಿದ್ದಂತೇ ಪ್ರಜ್ವಲ್ ಜರ್ಮನಿಯತ್ತ ಪ್ರಯಾಣ ಬೆಳೆಸಿದ್ದರು. ಪ್ರಜ್ವಲ್ ವಿದೇಶಕ್ಕೆ ತೆರಳಿದ್ದ ಬಗ್ಗೆಯೂ ಸಾಕಷ್ಟು ಟೀಕೆಗಳು ಕೇಳಿಬಂದಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಓಡಿ ಹೋಗಲು ಬಿಟ್ಟಿದ್ದು ಯಾರು ಎಂದು ಆರೋಪ ಪ್ರತ್ಯಾರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ ತಂಡ ರಚಿಸಿದೆ. ಇದೀಗ ಎಸ್ ಐಟಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ಮತ್ತು ಎಚ್ ಡಿ ರೇವಣ್ಣಗೆ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್ ತವರಿಗೆ ಮರಳಲು ಸಜ್ಜಾಗಿದ್ದಾರೆ.

ಎಸ್ಐಟಿ ವಿಚಾರಣೆಗೆ ಕರೆದಾಗ ಪ್ರಜ್ವಲ್ ಬರಲಿದ್ದಾರೆ ಎಂದು ರೇವಣ್ಣ ಈಗಾಗಲೇ ಹೇಳಿದ್ದರು. ಅದರಂತೆ ಮೇ 3 ರಂದು ಪ್ರಜ್ವಲ್ ಸ್ವದೇಶಕ್ಕೆ ವಾಪಸಾಗಲಿದ್ದಾರೆ. ಅದಾದ ಬಳಿಕ ಎಸ್ಐಟಿ ತಂಡದ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಎಸ್ಐಟಿ ಅಧಿಕಾರಿಗಳು ವಿಡಿಯೋದಲ್ಲಿರುವ ಮಹಿಳೆಯರನ್ನು ವಿಚಾರಣೆ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ